ಡಿ.ಕೆ.ಶಿವಕುಮಾರ್ 
ಪ್ರಧಾನ ಸುದ್ದಿ

ಆತ್ಮಹತ್ಯೆ ಮಾಡಿಕೊಳ್ಳುವವರು ರಣಹೇಡಿಗಳು; ದೇಶಭಕ್ತನಾಗಿ ಅವರ ಫೋಟೊ ಪ್ರದರ್ಶನ ತಡೆದೆ: ಡಿಕೆಶಿ

ಆತ್ಮಹತ್ಯೆ ಮಾಡಿಕೊಳ್ಳುವವರು ರಣಹೇಡಿಗಳು. ಹೀಗಾಗಿ ನಾನು ಒಬ್ಬ ದೇಶಭಕ್ತನಾಗಿ ಸ್ವಾತಂತ್ರ್ಯೋತ್ಸವ ಆಚರಣೆ ವೇಳೆ ಆತ್ಮಹತ್ಯೆಗೆ....

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವವರು ರಣಹೇಡಿಗಳು. ಹೀಗಾಗಿ ನಾನು ಒಬ್ಬ ದೇಶಭಕ್ತನಾಗಿ ಸ್ವಾತಂತ್ರ್ಯೋತ್ಸವ ಆಚರಣೆ ವೇಳೆ ಆತ್ಮಹತ್ಯೆಗೆ ಶರಣಾದವರ ಇಂಧನ ಸಚಿವ ಡಿಕೆ ಶಿವಕುಮಾರ್ ತಮ್ಮನ್ನು ತಾವು ಬುಧವಾರ ಸಮರ್ಥಿಸಿಕೊಂಡಿದ್ದಾರೆ.
ಆಗಸ್ಟ್ 15 ರಂದು ಮಂಡ್ಯದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಶಾಲಾ ಮಕ್ಕಳು ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ, ದಿವಂಗತ ಡಿವೈಎಸ್'ಪಿಗಳಾದ ಕಲ್ಲಪ್ಪ ಹಂಡಿಭಾಗ್ ಹಾಗೂ ಗಣಪತಿಯವರ ಫೋಟೊಗಳನ್ನು ಇಟ್ಟುಕೊಂಡು ಮೈದಾನದಲ್ಲಿ ಹಾಡಿಗೆ ನೃತ್ಯ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಆಕ್ರೋಶಗೊಂಡ ಸಚಿವ ಡಿ.ಕೆ. ಶಿವಕುಮಾರ್ ನೃತ್ಯವನ್ನು ಅರ್ಧಕ್ಕೆ ಸ್ಥಗಿತಗೊಳಿಸಿದ್ದರು.
ಈ ಬಗ್ಗೆ ಇಂದು ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ಆತ್ಮಹತ್ಯೆಗೆ ಶರಣಾಗುವವರು ರಣಹೇಡಿಗಳು. ಹಾಗಾಗಿ ದೇಶಕ್ಕಾಗಿ ಹೋರಾಡಿದವರ ಫೋಟೊ ಪ್ರದರ್ಶಿಸಬೇಕೇ ಹೊರತು. ಇಂತವರ ಫೋಟೋ ಪ್ರದರ್ಶಿಸಬೇಡಿ ಎಂದು ನಾನೊಬ್ಬ ದೇಶಭಕ್ತನಾಗಿ ಅವರ ಫೋಟೋ ಪ್ರದರ್ಶನ ತಡೆದೆ ಎಂದು ಹೇಳಿದರು.
ನಾನೊಬ್ಬ ದೇಶಭಕ್ತನಾಗಿ, ಸಚಿವನಾಗಿ ಆತ್ಮಹತ್ಯೆಗೆ ಶರಣಾದವರ ಫೋಟೊ ಪ್ರದರ್ಶನ ಸರಿಯಲ್ಲ ಎಂದು ತಡೆದಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT