ಪ್ರಧಾನ ಸುದ್ದಿ

ಅಮ್ನೆಸ್ಟಿ ಪರ ಗೃಹ ಸಚಿವ ಪರಮೇಶ್ವರ ಬ್ಯಾಟಿಂಗ್

Lingaraj Badiger
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ದೇಶ ವಿರೋಧಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ವಿವಾದಿತ ಅಮ್ನೆಸ್ಟಿ ಇಂಡಿಯಾ ಪರ ಬ್ಯಾಟಿಂಗ್ ಮಾಡುವ ಮೂಲಕ ಎಬಿವಿಪಿ ಪ್ರತಿಭಟನೆಗೆ ತುಪ್ಪ ಸುರಿದಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಅಮ್ನೆಸ್ಟಿ ಇಂಡಿಯಾ ಸಂಸ್ಥೆ ದೇಶದ್ರೋಹದ ಕೆಲಸ ಮಾಡಿದೆ ಅಂತ ಅನಿಸುತ್ತಿಲ್ಲ. ಕಾಶ್ಮೀರದಲ್ಲಿ ಹಿಂಸಾಚಾರ ಮುಂದುವರಿದಿರುವ ಹಿನ್ನೆಲೆಯಲ್ಲಿ ಕಾಶ್ಮೀರಿಗಳಿಗೆ ಧೈರ್ಯ ತುಂಬಲು ಅಮ್ನೆಸ್ಟಿ ಇಂಡಿಯಾ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಆದರೆ ಎಬಿವಿಪಿ ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವರು ವಿದೇಶದಲ್ಲಿ ಭಾಷಣ ಮಾಡುವ ಮೋದಿ ದೇಶದ ಹಾಗೂ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಅಮ್ನೆಸ್ಟಿ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.
SCROLL FOR NEXT