ಪಿ.ವಿ.ಸಿಂಧು 
ಪ್ರಧಾನ ಸುದ್ದಿ

ಸಿಂಧುಗೆ ತೆಲಂಗಾಣದಿಂದ 5 ಕೋಟಿ, ಆಂಧ್ರದಿಂದ 3 ಕೋಟಿ ಬಹುಮಾನ ಘೋಷಣೆ

ರಿಯೋ ಒಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ದಾಖಲೆ ನಿರ್ಮಿಸಿದ ಪಿ.ವಿ.ಸಿಂಧು ಅವರಿಗೆ ತೆಲಂಗಾಣ ಸರ್ಕಾರ...

ಹೈದ್ರಾಬಾದ್‌: ರಿಯೋ ಒಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ದಾಖಲೆ ನಿರ್ಮಿಸಿದ ಪಿ.ವಿ.ಸಿಂಧು ಅವರಿಗೆ ತೆಲಂಗಾಣ ಸರ್ಕಾರ 5 ಕೋಟಿ ರುಪಾಯಿ ನಗದು ಬಹುಮಾನ ಹಾಗೂ ಸರ್ಕಾರಿ ನೌಕರಿ ನೀಡುವುದಾಗಿ ಶನಿವಾರ ಘೋಷಿಸಿದೆ,
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಹೈದ್ರಾಬಾದ್‌ನ ಅಪ್ರತಿಮ ಸಾಧಕಿಗೆ 5 ಕೋಟಿ ರುಪಾಯಿ ಬಹುಮಾನ ಹಾಗೂ ಸರ್ಕಾರಿ ನೌಕರಿ ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ ಆಗಸ್ಟ್ 22ರಂದು ತಾಯ್ನಾಡಿಗೆ ಮರಳುತ್ತಿರುವ ಪಿ.ವಿ.ಸಿಂಧು ಅದ್ಧೂರಿ ಸ್ವಾಗತ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಆಂಧ್ರಪ್ರದೇಶ ಸರ್ಕಾರವೂ ಪಿ.ವಿ.ಸಿಂಧುಗೆ ಮೂರು ಕೋಟಿ ರುಪಾಯಿ, ಗ್ರೂಪ್ ಎ ನೌಕರಿ ಹಾಗೂ ನೂತನ ರಾಜಧಾನಿಯಲ್ಲಿ ಫ್ಲ್ಯಾಟ್ ನೀಡುವುದಾಗಿ ಘೋಷಿಸಿದೆ.
ಈ ಮಧ್ಯೆ, ಸಿಂಧು ನಮ್ಮರಾಜ್ಯದವಳು ಎಂದು ಆಂಧ್ರ ಮತ್ತು ತೆಲಂಗಾಣ ಪರಸ್ಪರ ಹಗ್ಗಜಗ್ಗಾಟ ನಡೆಸುತ್ತಿದ್ದು, ಹೈದ್ರಾಬಾದ್‌ನಲ್ಲಿ ಹುಟ್ಟಿ ಬೆಳೆದಿದ್ದು ಈಕೆ ತೆಲಂಗಾಣದವಳು ಎಂದು ಕೆಲವರು ವಾದಿಸಿದರೆ,ಇನ್ನು ಸಿಮಾಂಧ್ರದವರು ಸಿಂಧು ವಿಜಯವಾಡದಲ್ಲಿ ಹುಟ್ಟಿದ್ದು ನಮ್ಮ ರಾಜ್ಯದ 'ಅಮ್ಮಾಯಿ' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT