ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ 
ಪ್ರಧಾನ ಸುದ್ದಿ

ಉತ್ತರ ಪ್ರದೇಶ ವಿಧಾನಸಭೆಯಿಂದ ವಿರೋಧ ಪಕ್ಷದ ಶಾಸಕರನ್ನು ಹೊರದಬ್ಬಿದ ಮಾರ್ಷಲ್ ಗಳು

ಸದನದ ಬಾವಿಗೆ ನುಗ್ಗಿ ವಿಧಾನಸಭೆಯ ಕಲಾಪಗಳಿಗೆ ಅಡ್ಡಿಪಡಿಸಿದ್ದಕ್ಕಾಗಿ, ಬಿ ಎಸ್ ಪಿ, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯಿಂದ ಹೊರಹಾಕಲಾಗಿದೆ.

ಲಖನೌ: ಸದನದ ಬಾವಿಗೆ ನುಗ್ಗಿ ವಿಧಾನಸಭೆಯ ಕಲಾಪಗಳಿಗೆ ಅಡ್ಡಿಪಡಿಸಿದ್ದಕ್ಕಾಗಿ, ಬಿ ಎಸ್ ಪಿ, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯಿಂದ ಹೊರಹಾಕಲಾಗಿದೆ. 
ವಿಧಾನಸಭೆಯ ವಿಶೇಷ ಅಧಿವೇಶನದ ಎರಡನೇ ದಿನವಾದ ಇಂದು ವಿರೋಧ ಪಕ್ಷಗಳ ಶಾಸಕರು ಸರ್ಕಾರ ವಿರೋಧಿ ಬ್ಯಾನರ್ ಗಳನ್ನು ಪ್ರದರ್ಶಿಸಿ, ಬುಲಂದ್ಶಹರ್ ನಲ್ಲಿ ನಡೆದ ಇತ್ತೀಚಿನ ರೇಪ್ ವಿರುದ್ಧ, ಅಪರಾಧಗಳು ಹೆಚ್ಚುತ್ತಿರುವ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ, ದಲಿತರ ಮೇಲೆ ದೌರ್ಜನ್ಯಗಳ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. 
ವಿಧಾನಸಭೆಯಿಂದ ಶಾಸಕರನ್ನು ಹೊರಹಾಕಲು ಮಾರ್ಷಲ್ ಗಳಿಗೆ ಆದೇಶ ನೀಡಲಾಯಿತು. ಈಗ ಶಾಸಕರು ವಿಧಾನಸಭೆಯ ಗ್ಯಾಲರಿಯಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ. 
ವಿತ್ತ ಸಚಿವರೂ ಆಗಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮಧ್ಯಾಹ್ನ 25000 ಕೋಟಿಯ ಪೂರಕ ಬಜೆಟ್ ಅನ್ನು ಮಂಡಿಸಲಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT