ರಾಹುಲ್ ಗಾಂಧಿ ಮತ್ತು ಆರ್ ಎಸ್ ಎಸ್ ಮಾನಹಾನಿ ಜಟಾಪಟಿ 
ಪ್ರಧಾನ ಸುದ್ದಿ

ಮಹಾತ್ಮ ಹತ್ಯೆಗೆ ಆರ್ ಎಸ್ ಎಸ್ ನನ್ನು ದೂಷಿಸಲಿಲ್ಲ, ಆದರೆ ಜನ ಸಂಬಂಧ ಬೆಸೆದರು: ರಾಹುಲ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಹಾತ್ಮ ಗಾಂಧಿ ಹತ್ಯೆಗೆ ಆರ್ ಎಸ್ ಎಸ್ ಒಂದು ಸಂಸ್ಥೆಯಾಗಿ ಕಾರಣ ಎಂದು ಹೇಳಿಲ್ಲ ಆದರೆ ಜನ ಆ ಸಂಭಂದವನ್ನು ಸೃಷ್ಟಿಸಿದರು ಎಂದು ಬುಧವಾರ ಸುಪ್ರೀಂ

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಹಾತ್ಮ ಗಾಂಧಿ ಹತ್ಯೆಗೆ ಆರ್ ಎಸ್ ಎಸ್ ಒಂದು ಸಂಸ್ಥೆಯಾಗಿ ಕಾರಣ ಎಂದು ಹೇಳಿಲ್ಲ ಆದರೆ ಜನ ಆ ಸಂಭಂದವನ್ನು ಸೃಷ್ಟಿಸಿದರು ಎಂದು ಬುಧವಾರ ಸುಪ್ರೀಂ ಕೋರ್ಟ್ ಗೆ ಹೇಳಲಾಗಿದೆ. 
ನ್ಯಾಯಾಧೀಶ ದೀಪಕ್ ಮಿಶ್ರಾ ಮತ್ತು ನ್ಯಾಯಾಧೀಶ ಆರ್ ಎಫ್ ನಾರಿಮನ್ ಅವರಗಳನ್ನು ಒಳಗೊಂಡ ನ್ಯಾಯಪೀಠಕ್ಕೆ ಹಿರಿಯ ವಕೀಲ ಕಪಿಲ್ ಸಿಬಲ್ ಹೀಗೆ ಹೇಳಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ರಾಹುಲ್ ವಿರುದ್ಧ ಬಾಂಬೆ ಹೈಕೋರ್ಟ್ ನಲ್ಲಿ ಮಾನಹಾನಿ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ನಡೆಯುತ್ತಿತ್ತು. 
ಹೈಕೋರ್ಟ್ ನಲ್ಲಿ ರಾಹುಲ್ ನೀಡಿರುವ ಹೇಳಿಕೆಯನ್ನು ಗಣನೆಗೆ ತೆಗೆದುಕೊಂಡ ವಿಭಾಗೀಯ ಪೀಠ, ಕಾಂಗ್ರೆಸ್ ಮುಖಂಡ ತಾನು ಗಾಂಧಿ ಹತ್ಯೆಗೆ ಆರ್ ಎಸ್ ಎಸ್ ಸಂಘಟನೆಯನ್ನು ದೂಷಿಸಲಿಲ್ಲ ಬದಲಾಗಿ ಜನ ಆ ಸಂಬಂಧವನ್ನು ಬೆಸೆದರು ಎಂಬ ಸ್ಪಷ್ಟ ಹೇಳಿಕೆ ನೀಡಿದರಷ್ಟೇ ಈ ಪ್ರಕರಣವನ್ನು ಇಲ್ಲಿಗೆ ಮುಗಿಸಲು ಸಾಧ್ಯ ಎಂದು ಹೇಳಿದೆ. 
ಆದರೂ ಆರ್ ಎಸ್ ಎಸ್ ಪ್ರತಿನಿಧಿಸುವ ವಕೀಲ ಉಮೇಶ್ ಲಲಿತ್ ಅವರು ತಮ್ಮ ಕಕ್ಷಿದಾರರ ಸೂಚನೆ ಪಡೆಯಲು ಸಮಯ ಕೋರಿದ್ದರಿಂದ ಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1 ಕ್ಕೆ ಮುಂದೂಡಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT