ರೋಹಿತ್ ವೇಮುಲಾ 
ಪ್ರಧಾನ ಸುದ್ದಿ

ರೋಹಿತ್ ದಲಿತನಾಗಿರಲಿಲ್ಲ ಎಂಬ ಸಮಿತಿ ವರದಿ ಸಂಪೂರ್ಣ ತಪ್ಪು: ಪುನಿಯಾ

ರೋಹಿತ್ ವೇಮುಲಾ ಪರಿಶಿಷ್ಟ ಜಾತಿಗೆ ಸೇರಿರಲಿಲ್ಲ ಎಂಬ ರೂಪನ್ವಾಲ್ ಸಮಿತಿಯ ವರದಿ ಸಂಪೂರ್ಣ ತಪ್ಪು ಎಂದಿರುವ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ (ಎನ್ ಸಿ ಎಸ್ ಸಿ) ಅಧ್ಯಕ್ಷ ಪಿ ಎಲ್ ಪುನಿಯಾ

ಬಾರಾಬಂಕಿ: ರೋಹಿತ್ ವೇಮುಲಾ ಪರಿಶಿಷ್ಟ ಜಾತಿಗೆ ಸೇರಿರಲಿಲ್ಲ ಎಂಬ ರೂಪನ್ವಾಲ್ ಸಮಿತಿಯ ವರದಿ ಸಂಪೂರ್ಣ ತಪ್ಪು ಎಂದಿರುವ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ (ಎನ್ ಸಿ ಎಸ್ ಸಿ) ಅಧ್ಯಕ್ಷ ಪಿ ಎಲ್ ಪುನಿಯಾ ವರದಿಯನ್ನು ತಿರಸ್ಕರಿಸಿದ್ದಾರೆ. 
ಜಿಲ್ಲಾ ಕಲೆಕ್ಟರ್ ಮತ್ತು ಶಾಸನ ಸಮಿತಿ ಎರಡು ಪ್ರತ್ಯೇಕ ವರದಿಗಳಲ್ಲಿ ರೋಹಿತ್ ಇತರ ಹಿಂದುಳಿಗ ವರ್ಗಕ್ಕೆ ಸೇರಿರಲಿಲ್ಲ ಬದಲಾಗಿ ದಲಿತ ಸಮುದಾಯಕ್ಕೆ ಸೇರಿದ್ದರು ಎಂದು ಈಗಾಗಲೇ ತಿಳಿಸಿವೆ ಎಂದು ಎನ್ ಸಿ ಎಸ್ ಸಿ ಅಧ್ಯಕ್ಷ ಹೇಳಿದ್ದಾರೆ. 
"ಕಾಂಗ್ರೆಸ್ ಈ ವಿಷಯ ಎತ್ತಿದಾಗ ಕಡೆಗಣಿಸಿ ಈಗ ರೋಹಿತ್ ದಲಿತನಾಗಿರಲಿಲ್ಲ ಎಂಬ ವರದಿ ಸಲ್ಲಿಸಲಾಗುತ್ತಿದೆ" ಎಂದು ಪುನಿಯಾ ನೆನ್ನೆ ವರದಿಗಾರರಿಗೆ ಹೇಳಿದ್ದಾರೆ. 
ಮೊದಲನೇ ದಿನದಿಂದಲೂ ವೇಮುಲಾ ದಲಿತನಾಗಿರಲಿಲ್ಲ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದವನಾಗಿದ್ದರು ಎಂದು ಬಿಜೆಪಿ ಪುನರುಚ್ಛಿಸುತ್ತಿದ್ದು ಈಗ ಅದನ್ನು ಸಮರ್ಥಿಸಿಕೊಳ್ಳಲೆಂದೇ ಈ ಸಮಿತಿ ರಚಿಸಲಾಗಿತ್ತು ಎಂದು ಕಾಂಗ್ರೆಸ್ ಸಂಸದ ಆರೋಪಿಸಿದ್ದಾರೆ. 
ಹೈದರಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ವೇಮುಲಾ ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣ ದೇಶದಾದ್ಯಂತ ತೀವ್ರ ಪ್ರತಿಭಟನೆಗೆ ಎಡೆ ಮಾಡಿಕೊಟ್ಟಿತ್ತು ಮತ್ತು ಅಂದಿನ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ ಇದಕ್ಕೆ ಕಾರಣ ಎಂದು ದೂರಿ ರಾಜಿನಾಮೆಗೆ ಆಗ್ರಹಿಸಲಾಗಿತ್ತು. 
ಆತ್ಮಹತ್ಯೆಗೆ ಕಾರಣಗಳನ್ನು-ಪರಿಸ್ಥಿತಿಯನ್ನು ಕಂಡುಹಿಡಿಯಯಲು ಮಾನವ ಸಂಪನ್ಮೂಲಗಳ ಸಚಿವಾಲಯ ನಿವೃತ್ತ ನ್ಯಾಯಾಧೀಶ ಎ ಕೆ ರೂಪನ್ವಾಲ್ ಆಯೋಗವನ್ನು ರಚಿಸಿತ್ತು.
"26 ವರ್ಷದ ದಲಿತ ಸಂಶೋಧಕರ ಆತ್ಮಹತ್ಯೆಗೆ ಕಾರಣಗಳನ್ನು ಹುಡುಕಲು ಆಯೋಗಕ್ಕೆ ತಿಳಿಸಲಾಗಿತ್ತು ಆದರೆ ಅದು ಬಿಟ್ಟು ಆಯೋಗ ರೋಹಿತ್ ಅವರ ಜಾತಿ ಸಂಶೋಧನೆಗೆ ಹೊರಟಿದ್ದು ದುರದೃಷ್ಟಕರ" ಎಂದಿರುವ ಪುನಿಯಾ "ಅವರು ಕಂಡು ಹಿಡಿರುವುದು ತಪ್ಪು ಮತ್ತು ಕಲ್ಪನೆ" ಎಂದು ಕೂಡ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT