ಹಣಕಾಸು ವರ್ಷ ಬದಲಾವಣೆ ಬಗ್ಗೆ ಸಾರ್ವಜನಿಕರಿಂದ ಸಲಹೆ ಕೇಳಿದ ಕೇಂದ್ರ ಸರ್ಕಾರ 
ಪ್ರಧಾನ ಸುದ್ದಿ

ಹಣಕಾಸು ವರ್ಷ ಬದಲಾವಣೆ ಬಗ್ಗೆ ಸಾರ್ವಜನಿಕರಿಂದ ಸಲಹೆ ಕೇಳಿದ ಕೇಂದ್ರ ಸರ್ಕಾರ

ಹಣಕಾಸು ವರ್ಷವನ್ನು ಬದಲಾವಣೆ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಸಲಹೆ ಕೇಳಿದೆ.

ನವದೆಹಲಿ: ಹಣಕಾಸು ವರ್ಷವನ್ನು ಬದಲಾವಣೆ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಸಲಹೆ ಕೇಳಿದೆ. ಪ್ರಸ್ತುತ ಹಣಕಾಸು ವರ್ಷ ಏಪ್ರಿಲ್ 1 ರಿಂದ ಪ್ರಾರಂಭವಾಗಿ ಅದರ ಮಾರ್ಚ್ 31 ಕ್ಕೆ ಅಂತ್ಯಗೊಳ್ಳಲಿದೆ.

ಆದರೆ ಪ್ರಸ್ತುತ ಇರುವ ಹಣಕಾಸು ವರ್ಷವನ್ನು ಜನವರಿ 1 ರಿಂದ ಡಿಸೆಂಬರ್ ಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಹಣಕಾಸು ವರ್ಷವನ್ನು ಜನವರಿಂದ 1 ರಿಂದ ಡಿಸೇಂಬರ್  31 ಕ್ಕೆ ವರ್ಗಾಯಿಸುವ ವಿಷಯದಲ್ಲಿ ಸಾರ್ವಜನಿಕರಿಂದಲೇ ಸಲಹೆ-ಸೂಚನೆಗಳನ್ನು ಪಡೆಯಲು ಮುಂದಾಗಿದೆ.

ಹೊಸ ಆರ್ಥಿಕ ವರ್ಷದ ಕುರಿತು ಮೈ ಗೌರ್ನಮೆಂಟ್ ವೆಬ್ ಸೈಟ್ ಮೂಲಕ ಸಾರ್ವಜನಿಕರು ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ. ಹಣಕಾಸು ವರ್ಷವನ್ನು ಬದಲಾವಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ಪ್ರಾರಂಭವಾಗಿದ್ದು, ಬಜೆಟ್ ಮಂಡನೆ ವೇಳೆ ಮುಂಗಾರು ಪ್ರಮಾಣ ಸೇರಿದಂತೆ ಹಲವು ಅಂಶಗಳ ಮೇಲೆ ಪರಿಣಾಮ ಬೀರಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.  ಹೊಸ ಆರ್ಥಿಕ ವರ್ಷವನ್ನು ನಿರ್ಧರಿಸುವುದಕ್ಕಾಗಿ ಕೇಂದ್ರ ಸರ್ಕಾರ ಮುಖ್ಯ ಹಣಕಾಸು ಸಲಹೆಗಾರ ಶಂಕರ್ ಆಚಾರ್ಯ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT