ಧಾರಾವಾಡ ಐಐಟಿ ಲೋಕಾರ್ಪಣೆ (ಕೆಪಿಎನ್ ಚಿತ್ರ) 
ಪ್ರಧಾನ ಸುದ್ದಿ

ಬಹುದಿನಗಳ ಕನಸು ನನಸು; ಧಾರಾವಾಡ ಐಐಟಿ ಲೋಕಾರ್ಪಣೆ

ದಶಕಗಳ ಕನ್ನಡಿಗರ ಕನಸು ನನಸಾಗಿದ್ದು, ಪ್ರತಿಷ್ಠಿತ ಧಾರವಾಡ ಐಐಟಿ ಸಂಸ್ಥೆಯನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು.

ಧಾರವಾಡ: ದಶಕಗಳ ಕನ್ನಡಿಗರ ಕನಸು ನನಸಾಗಿದ್ದು, ಪ್ರತಿಷ್ಠಿತ ಧಾರವಾಡ ಐಐಟಿ ಸಂಸ್ಥೆಯನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು.

ಧಾರವಾಡ ನಗರದ ಹೊರವಲಯದಲ್ಲಿ ಮಾಡಲಾಗಿರುವ ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆಯನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಕೇಂದ್ರ ಮಾನವ ಸಂಪನ್ಮೂಲ ಖಾತೆ  ಸಚಿವ ಪ್ರಕಾಶ ಜಾವಡೇಕರ್ ಅವರು ಐಐಟಿಯನ್ನು ಲೋಕಾರ್ಪಣೆ ಮಾಡಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಆರ್ ವಿ ದೇಶಪಾಂಡೆ, ಹೆಚ್ ಕೆ ಪಾಟೀಲ್, ಸಂತೋಷ್  ಲಾಡ್, ಮಾಜಿ ಮುಖ್ಯಮಂತ್ರಿ, ವಿಧಾನ ಸಭೆ ಪ್ರತಿ ಪಕ್ಷದ ನಾಯಕರಾದ ಜಗದೀಶ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ ಮತ್ತಿತರರು ಹಾಜರಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಮುಂಬೈ ಐಐಟಿಯಿಂದ ಆಗಮಿಸಿದ್ದ ತಜ್ಞರು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಸಂಬಂಧಿತ ಪವರ್ ಪಾಯಿಂಟ್ ಪ್ರೆಸೆಂಟೇಷನ್ ನೀಡಿದರು. ಬಳಿಕ ಐಐಟಿ  ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ಐಐಟಿ ತರಗತಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿದರು.

ಕಳೆದ ತಿಂಗಳೇ ಐಐಟಿ ಉದ್ಘಾಟನೆಗೆ ನಿರ್ಧರಿಸಲಾಗಿತ್ತಾದರೂ ಕಳಸಾ ಬಂಡೂರಿ ನಾಲಾ ಪ್ರತಿಭಟನೆ ಹಿನ್ನಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಕಾರ್ಯಕ್ರಮಕ್ಕೆ  ಸುಮಾರು 2000 ಸಾವಿರ ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗಿತ್ತು.

ಧಾರವಾಡದ ಹೊರವಲಯದ ತಾತ್ಕಾಲಿಕವಾಗಿ ನೀರು ಮತ್ತು ಭೂಮಿ ನಿರ್ವಹಣಾ ಸಂಸ್ಥೆ (ವಾಲ್ಮಿ)ಆವರಣದಲ್ಲಿ ಐಐಟಿ ಕಾರ್ಯ ನಿರ್ವಹಿಸಲಿದ್ದು, ಸಂಸ್ಥೆಯ ಶಾಶ್ವತ ಕ್ಯಾಂಪಸ್ ಶೀಘ್ರದಲ್ಲಿಯೇ  ಕೆಲ್ಗೇರಿ ಪಟ್ಟಣದ ಸಮೀದಲ್ಲಿ ಸುಮಾರು 500 ಎಕರೆ ವ್ಯಾಪ್ತಿ ಪ್ರದೇಶದಲ್ಲಿ ತಲೆ ಎತ್ತಲಿದೆ. ಈ ಸಂಸ್ಥೆಯನ್ನು ಮುಂಬೈ ಐಐಟಿ ಸಂಸ್ಥೆ ತಜ್ಞರು ಮೇಲ್ವಿಚಾರಣೆ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT