ಕಂಚಿ ಶ್ರೀ 
ಪ್ರಧಾನ ಸುದ್ದಿ

ಕಂಚಿ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಕಂಚಿ ಕಾಮಕೋಟಿ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರು ಮಂಗಳವಾರ ಪೂಜೆ ಮಾಡುತ್ತಿದ್ದ ವೇಳೆಯೇ ಪ್ರಜ್ಞೆ ತಪ್ಪಿದ್ದು...

ವಿಜಯವಾಡ: ಕಂಚಿ ಕಾಮಕೋಟಿ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರು ಮಂಗಳವಾರ ಪೂಜೆ ಮಾಡುತ್ತಿದ್ದ ವೇಳೆಯೇ ಪ್ರಜ್ಞೆ ತಪ್ಪಿದ್ದು, ಕೂಡಲೇ ಅವರನ್ನು ವಿಜಯವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಂಚಿ ಶ್ರೀಗಳನ್ನು ಇಲ್ಲಿನ ಆಂಧ್ರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚತುರ್ಮಾಸ ದೀಕ್ಷ ಹಿನ್ನೆಲೆಯಲ್ಲಿ ನಿತ್ಯ ಯಾವುದೇ ಆಹಾರ ಸೇವಿಸದೆ ಕೃಷ್ಣ ನದಿಯಲ್ಲಿ ಸ್ನಾನ ಮಾಡಿ ಪೂಜೆ ಮಾಡುತ್ತಾರೆ. ಇದರಿಂದ ಅವರ ರಕ್ತದೊತ್ತಡ ಹಾಗೂ ಸಕ್ಕರೆ ಪ್ರಮಾಣ ಕಡಿಮೆಯಾಗಿದ್ದರಿಂದ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರು ಈ ಇಳಿ ವಯಸ್ಸಿನಲ್ಲಿ ಈ ರೀತಿಯ ಉಪವಾಸ ಮಾಡಿದ್ದರಿಂದ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಶ್ರೀಗಳಿಗೆ ಕೃತಕ ಉಸಿರಾಟ ಅಳವಡಿಸಲಾಗಿದೆ ಎನ್ನಲಾಗಿದೆ.
ಈ ಮಧ್ಯೆ ಕಂಚಿ ಶ್ರೀಗಳಿಗೆ ಯಾವುದೇ ಅಪಾಯ ಇಲ್ಲ. ಅವರ ಆರೋಗ್ಯ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನಿಂದ ಕೆಲವು ವೈದ್ಯರನ್ನು ಕರೆಸಿಕೊಳ್ಳಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರೊಬ್ಬರು ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ