ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯಸಭಾ ಸದಸ್ಯರು (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ರಾಜ್ಯಸಭಾ ಸದಸ್ಯರಿಗೆ 2014ರಲ್ಲಿ ಬಿಜೆಪಿ ಸೋತ ಲೋಕಸಭಾ ಕ್ಷೇತ್ರಗಳ ಜವಾಬ್ದಾರಿ

2019ರ ಲೋಕಸಭಾ ಚುನಾವಣೆ ಈಗಿನಿಂದಲೇ ಸಿದ್ಧತೆ ನಡೆಸಿರುವ ಆಡಳಿತಾರೂಢ ಬಿಜೆಪಿ 2014ರಲ್ಲಿ ತಾನು ಸೋತಿರುವ ಲೋಕಸಭಾ ಕ್ಷೇತ್ರಗಳನ್ನು ಶತಾಯಾಗತಾಯ ಗೆಲ್ಲಲೇಬೇಕು ಎನ್ನುವ ಕಾರಣಕ್ಕೆ ಹಾಲಿ ಬಿಜೆಪಿ ರಾಜ್ಯಸಭಾ ಸದಸ್ಯರಿಗೆ ಆ ಕ್ಷೇತ್ರಗಳ ಮೇಲುಸ್ತುವಾರಿ ವಹಿಸಿದೆ.

ನವದೆಹಲಿ: 2019ರ ಲೋಕಸಭಾ ಚುನಾವಣೆ ಈಗಿನಿಂದಲೇ ಸಿದ್ಧತೆ ನಡೆಸಿರುವ ಆಡಳಿತಾರೂಢ ಬಿಜೆಪಿ 2014ರಲ್ಲಿ ತಾನು ಸೋತಿರುವ ಲೋಕಸಭಾ ಕ್ಷೇತ್ರಗಳನ್ನು ಶತಾಯಾಗತಾಯ  ಗೆಲ್ಲಲೇಬೇಕು ಎನ್ನುವ ಕಾರಣಕ್ಕೆ ಹಾಲಿ ಬಿಜೆಪಿ ರಾಜ್ಯಸಭಾ ಸದಸ್ಯರಿಗೆ ಆ ಕ್ಷೇತ್ರಗಳ ಮೇಲುಸ್ತುವಾರಿ ವಹಿಸಿದೆ.

ಮೂಲಗಳ ಪ್ರಕಾರ ಬಿಜೆಪಿಯಿಂದ ಆರಿಸಿಬಂದಿರುವ ರಾಜ್ಯಸಭಾ ಸದಸ್ಯರಿಗೆ 2014ರಲ್ಲಿ ಪಕ್ಷ ಸೋತಂಥಹ ಕ್ಷೇತ್ರಗಳ ಮೇಲುಸ್ತುವಾರಿ ವಹಿಸುವಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು  ಆದೇಶಿಸಿದ್ದು, ಅವರ ಸೂಚನೆಯಂತೆ ಪಕ್ಷ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಸಭಾ ಸದಸ್ಯರಿಗೆ ಆ ಕ್ಷೇತ್ರಗಳ ಜವಾಬ್ದಾರಿ ನೀಡಿದ್ದಾರೆ. ಬಿಜೆಪಿಯ 52 ರಾಜ್ಯಸಭಾ ಸದಸ್ಯರಿಗೆ ಯಾವುದೇ  ನಿರ್ಧಿಷ್ಟ ಕ್ಷೇತ್ರವಿಲ್ಲ. ಹೀಗಾಗಿ ಅವರಿಗೆ 2014ರಲ್ಲಿ ಬಿಜೆಪಿ ಸೋತಿರುವಂತಹ ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದ್ದು, ಆ ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿ ಈ ಸದಸ್ಯರ ಮೇಲಿದೆ.

ಇನ್ನು ಬಿಜೆಪಿಯ 52 ರಾಜ್ಯಸಭಾ ಸದಸ್ಯರ ಪೈಕಿ 12 ಮಂದಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈ ಸಚಿವರೊಂದಿಗೆ ಸದಸ್ಯರು ಸಂಪರ್ಕ ಸಾಧಿಸುವ ಮೂಲಕ ಆಯಾ ಕ್ಷೇತ್ರಗಳ  ಅಭಿವೃದ್ಧಿ ಕೆಲಸದಲ್ಲಿ ತೊಡಗಬೇಕು. ಅಂತೆಯೇ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪಕ್ಷವನ್ನು ಬಲಪಡಿಸಬೇಕು. ಆ ಮೂಲಕ 2019ರ ಲೋಕಸಭಾ  ಚುನಾವಣೆಯಲ್ಲಿ ಆ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಯಾಗಿದೆ.

ಪಕ್ಷದ ಈ ಯೋಜನೆಯಲ್ಲಿ ಯಶಸ್ಸು ಸಾಧಿಸುವ ರಾಜ್ಯಸಭಾ ಸದಸ್ಯರಿಗೆ 2019ರಲ್ಲೂ ಪಕ್ಷದ ವತಿಯಿಂದ ರಾಜ್ಯಸಭೆಗೆ ಆಯ್ಕೆ ಮಾಡುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಪಕ್ಷದ  ಮೂಲಗಳು ತಿಳಿಸಿವೆ.

ಒಟ್ಟಾರೆ 2019ರ ಲೋಕಸಭಾ ಚುನಾವಣೆಗೆ ಇನ್ನೂ 2 ವರ್ಷಗಳು ಬಾರಿ ಇರುವಂತೆಯೇ ಬಿಜೆಪಿ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ಪ್ರಸ್ತುತ ಬೆಜೆಪಿ 52 ರಾಜ್ಯಸಭಾ ಸದಸ್ಯರನ್ನು ಹೊಂದಿದ್ದು,  ಈ ಪೈಕಿ 12 ಮಂದಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT