ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

2015ರಲ್ಲೇ ದೇಶದಲ್ಲಿ ಅತಿ ಹೆಚ್ಚು ಉಗ್ರ ದಾಳಿ: ವರದಿ

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಕೇರಳದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಕೇರಳವನ್ನು ಸೋಮಾಲಿಯಾಗೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಕೇರಳದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಕೇರಳವನ್ನು ಸೋಮಾಲಿಯಾಗೆ ಹೋಲಿಕೆ ಮಾಡಿದ್ದರು. ಇದಕ್ಕೆ ಮಲೆಯಾಳಿಗಳು ತೀವ್ರ ವಿರೋಧ ವ್ಯಕ್ತಪಡಿಸಿ, ಟ್ವಿಟರ್'ನಲ್ಲಿ #PoMoneModi (ನರಸಿಂಹಮ್ ಸಿನೆಮಾದ ಪೋ ಮೋಣೆ ದಿನೇಶ ಮಾದರಿಯಲ್ಲಿ) ಅಭಿಯಾನವನ್ನೇ ನಡೆಸಿ, ವಿಡಂಬನಾತ್ಮಕವಾಗಿ ಪ್ರತಿಕ್ರಿಯಿಸಿದ್ದರು. ಇದಕ್ಕೆ ಕೇರಳಿಗರು ಸಾವಿರಾರು ಟ್ವೀಟ್ - ರಿಟ್ವೀಟ್ 'ಗಳು ಪೋ ಮೋನೆ ಮೋದಿ ಅನ್ನುತ್ತ ಮೋದಿಯ ಮಾತುಗಳಿಗೆ ತಮ್ಮ ತಿರಸ್ಕಾರ ತೋರಿದ್ದರು.
ಇದೀಗ ಅರ್ಥಶಾಸ್ತ್ರ ಮತ್ತು ಶಾಂತಿ ಸಂಸ್ಥೆ ಪ್ರಕಟಿಸಿರುವ ಜಾಗತಿಕ ಭಯೋತ್ಪಾದನೆ ಸೂಚ್ಯಂಕದಲ್ಲಿ ಉಗ್ರ ದಾಳಿ ವಿಚಾರದಲ್ಲಿ ಸೋಮಾಲಿಯಾ ಮತ್ತು ಭಾರತಕ್ಕೆ ಒಂದು ಸಣ್ಣ ವ್ಯತ್ಯಾಸವಿರುವುದು ಬಹಿರಂಗವಾಗಿದೆ. ಅದು ಏನೆಂದರೆ, ಉಗ್ರ ಪಟ್ಟಿಯಲ್ಲಿ ಭಾರತ 7,484 ಅಂಕಗಳನ್ನು ಪಡೆದು 8ನೇ ಸ್ಥಾನದಲ್ಲಿದ್ದರೆ, ಸೋಮಾಲಿಯಾ 7,548 ಅಂಕಗಳನ್ನು ಪಡೆದು 7ನೇ ಸ್ಥಾನದಲ್ಲಿದೆ.
ಆದಾಗ್ಯೂ, ಈ ಹಿಂದಿನ ನಾಲ್ಕು ಅಥವಾ ಐದನೇ  ಜಾಗತಿಕ ಭಯೋತ್ಪಾದನೆ ಸೂಚ್ಯಂಕವನ್ನು ಗಮನಿಸಿದರೆ, ಭಾರತ ತಕ್ಕ ಮಟ್ಟಿನ ಸುಧಾರಣೆ ಕಂಡಿದೆ. ಆದರೆ, 2000ದಿಂದ 2015ರವರೆಗೆ ಹೋಲಿಕೆ ಮಾಡಿದರೆ, 2015ರಲ್ಲೇ ಅತಿ ಹೆಚ್ಚು ಉಗ್ರ ದಾಳಿಗಳು ನಡೆದಿವೆ ಎಂದು ಹೇಳಿದೆ. ಅಲ್ಲದೆ 2000ದಿಂದೀಚೆಗೆ ನಡೆದ ದಾಳಿಗಳಲ್ಲಿ ಎರಡನೇ ಅತಿ ಕಡಿಮೆ ಸಾವು ಸಂಭವಿಸಿವೆ ಮತ್ತು ಶೇ.80ರಷ್ಟು ದಾಳಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಸೂಚ್ಯಂಕ ತಿಳಿಸಿದೆ.
ಇದೇ ವೇಳೆ ಭಾರತದಲ್ಲಿ ನಡೆಯುವ ಭಯೋತ್ಪಾದನೆಯ ಸ್ವರೂಪ ವಿಭಿನ್ನ ಎಂದಿರುವ ಸೂಚ್ಯಂಕ, ಜನರನ್ನು ಹತ್ಯೆ ಮಾಡುವ ಬದಲು ರಾಜಕೀಯ ಮಾನ್ಯತೆಗಾಗಿ ಹೆಚ್ಚು ದಾಳಿ ನಡೆಯುತ್ತಿವೆ. ಉದಾಹರಣೆಗೆ, ಪೀಪಲ್ಸ್ ಲಿಬರೇಷನ್ ಆರ್ಮಿ ಸುಮಾರು 10 ದಾಳಿಗಳಲ್ಲಿ ನಡೆಸಿದೆ. ಆದರೆ ಈ ದಾಳಿಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ವಿವರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT