ಜಯಲಲಿತಾ 
ಪ್ರಧಾನ ಸುದ್ದಿ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನ ಸುದ್ದಿ ತಳ್ಳಿಹಾಕಿದ ಅಪೋಲೊ ಆಸ್ಪತ್ರೆ

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ....

ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ 'ಅಮ್ಮ' ಜಯರಾಮ್ ಜಯಲಲಿತಾ ಅವರು ನಿಧನರಾಗಿದ್ದಾರೆ ಎಂಬ lತಮಿಳು ಟೀವಿ ಮಾಧ್ಯಮಗಳ ವರದಿಯನ್ನು ಆಸ್ಪತ್ರೆ ಸ್ಪಷ್ಟವಾಗಿ ತಳ್ಳಿಹಾಕಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಪೋಲೊ ಆಸ್ಪತ್ರೆ, ಜಯಲಲಿತಾ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಅವರಿಗೆ ಕೃತಕ ಉಸಿರಾಟ ಅಳವಡಿಸಲಾಗಿದೆ. ಅವರನ್ನು ಬದುಕಿಸಿಕೊಳ್ಳುವ ಎಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದೆ.
ತಮಿಳು ಹಾಗೂ ಕನ್ನಡದ ಕೆಲವು ಸುದ್ದಿ ವಾಹಿನಿಗಳು ಜಯಲಲಿತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ವಿಧಿವಶರಾಗಿದ್ದಾರೆ ಎಂದು ವರದಿ ಮಾಡಿದ್ದವು. ಆದರೆ ನಿಧನ ವಾರ್ತೆಯನ್ನು ಆಸ್ಪತ್ರೆ ಇದುವರೆಗೂ ಅಧಿಕೃತಗೊಳಿಸಿಲ್ಲ.
ತೀವ್ರ ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿರುವ 68 ವರ್ಷದ ಜಯಲಲಿತಾ ಅವರು ಕಳೆದ ಸೆಪ್ಟೆಂಬರ್ 22ರಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಚ್ಚೀಚಿಗಷ್ಟೇ ತಮಿಳುನಾಡು ಮುಖ್ಯಮಂತ್ರಿಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮಾತನಾಡುತ್ತಿದ್ದಾರೆ ಎಂದು ಅಪೋಲೊ ಆಸ್ಪತ್ರೆಯ ಅಧ್ಯಕ್ಷ ಡಾ. ಪ್ರತಾಪ್ ಸಿ.ರೆಡ್ಡಿ ಅವರು ಹೇಳಿದ್ದರು. ಆದರೆ ನಿನ್ನೆ ಸಂಜೆ ಹೃದಯಾಘಾತಕ್ಕೆ ಒಳಗಾಗಿದ್ದರಿಂದ ಅವರ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ಇಂದು ಬೆಳಗ್ಗೆಯಿಂದ ಇಸಿಎಂಒ ಉಪಕರಣದ ನೆರವಿನ ಮೂಲಕ ಆಮ್ಲಜನಕವನ್ನು ಪೂರೈಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT