ಜಯಲಲಿತಾ ಪಾರ್ಥಿವ ಶರೀರ 
ಪ್ರಧಾನ ಸುದ್ದಿ

ಜಯಾ ಯುಗಾಂತ್ಯ, ಮಣ್ಣಲ್ಲಿ ಮಣ್ಣಾದ 'ಅಮ್ಮ'

ತೀವ್ರ ಅನಾರೋಗ್ಯದಿಂದ ಸೋಮವಾರ ರಾತ್ರಿ ವಿಧಿವಶರಾದ ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ ಅಮ್ಮ ಜಯರಾಮನ್...

ಚೆನ್ನೈ: ತೀವ್ರ ಅನಾರೋಗ್ಯದಿಂದ ಸೋಮವಾರ ರಾತ್ರಿ ವಿಧಿವಶರಾದ ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ ಅಮ್ಮ ಜಯರಾಮನ್ ಜಯಲಲಿತಾ ಅವರ ಅಂತ್ಯ ಸಂಸ್ಕಾರ ಮಂಗಳವಾರ ಸಂಜೆ ಚೆನ್ನೈನ ಮರೀನಾ ಬೀಚ್ ನಲ್ಲಿರುವ ಎಂಜಿಆರ್ ಸ್ಮಾರಕದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಉಸ್ತುವಾರಿ ರಾಜ್ಯಪಾಲ ಸಿ.ವಿದ್ಯಾಸಾಗರ್, ಮಾಜಿ ರಾಜ್ಯಪಾಲರಾದ ಕೆ.ರೋಸಯ್ಯ, ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಅವರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯಾತಿಗಣ್ಯರು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಜಯಲಲಿತಾ ಅವರಿಗೆ ಅಂತಿಮ ನಮನ ಸಲ್ಲಿಸಿದರು. 
ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರು ಬ್ರಾಹ್ಮಣ ಅಯ್ಯಂಗಾರ್ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದ ನಂತರ ಶ್ರೀಗಂಧದ ವಿಶೇಷ ಪೆಟ್ಟಿಗೆಯಲ್ಲಿ ಜಯಲಲಿತಾ ಅವರ ಪಾರ್ಥಿವ ಶರೀರವನ್ನು ಸೇನಾ ಸಿಬ್ಬಂದಿ ಸಮಾಧಿಯೊಳಗೆ ಇಳಿಸಿದರು. 
ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಅವರ ಸಮಾಧಿ ಸಮೀಪವೇ ಜಯಲಲಿತಾ ಅವರ ಸಮಾಧಿ ಸಹ ನಿರ್ಮಿಸಲಾಗಿದೆ.
ಇದಕ್ಕೂ ಮುನ್ನ ಜಯಲಲಿತಾ ಅವರ ಪಾರ್ಥಿವ ಶರೀರವನ್ನು ರಾಜಾಜಿ ಹಾಲ್ ನಿಂದ ಮಿಲಿಟರಿಯ ತೆರೆದ ವಿಶೇಷ ವಾಹನದ ಮೂಲಕ ಮರೀನಾ ಬೀಚ್ ಗೆ ಮೆರವಣಿಗೆ ಮೂಲಕ ತರಲಾಯಿತು. ಈ ವೇಳೆ ಲಕ್ಷಾಂತರ ಅಭಿಮಾನಿಗಳು ಅಮ್ಮ, ಅಮ್ಮ ಎಂದು ಘೋಷಣೆ ಕೂಗುತ್ತಾ ಭಾವಪೂರ್ಣ ವಿಧಾನ ಹೇಳಿದರು.
ರಸ್ತೆಯ ಇಕ್ಕೆಲಗಳಲ್ಲಿಯೂ ಜನಸಾಗರ ತುಂಬಿದ್ದರೆ, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರ ಕಣ್ಣೀರು ಮುಗಿಲುಮುಟ್ಟಿತ್ತು. ರಸ್ತೆ, ಕಟ್ಟಡ, ಮರಗಳ ಮೇಲೆಲ್ಲ ಕುಳಿತು ಜನರು ತಮ್ಮ ನಾಯಕಿಯ ಅಂತಿಮ ದರ್ಶನ ಪಡೆಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಮೆರವಣಿಗೆಯಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಸೇರಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!