ಹಿರಿಯ ವಕೀಲ ಪ್ರಶಾಂತ್ ಭೂಷಣ್ 
ಪ್ರಧಾನ ಸುದ್ದಿ

ಡಿಮಾನೆಟೈಸೇಷನ್ ನಿಂದ ಗಮನ ಬೇರೆಡೆ ಸೆಳೆಯಲು ಕೇಂದ್ರದಿಂದ ಸಿಬಿಐ ದುರ್ಬಳಕೆ: ಭೂಷಣ್

ಅಗಸ್ಟಾ ವೆಸ್ಟ್ ಲ್ಯಾಂಡ್ ಒಪ್ಪಂದ ಪ್ರಕರಣದಲ್ಲಿ ಮಾಜಿ ಏರ್ ಚೀಫ್ ಮಾರ್ಷಲ್ ಎಸ್ ಪಿ ತ್ಯಾಗಿ ಅವರನ್ನು ಸಿಬಿಐ ಬಂಧಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್,

ನೋಯ್ಡಾ: ಅಗಸ್ಟಾ ವೆಸ್ಟ್ ಲ್ಯಾಂಡ್ ಒಪ್ಪಂದ ಪ್ರಕರಣದಲ್ಲಿ ಮಾಜಿ ಏರ್ ಚೀಫ್ ಮಾರ್ಷಲ್ ಎಸ್ ಪಿ ತ್ಯಾಗಿ ಅವರನ್ನು ಸಿಬಿಐ ಬಂಧಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, ನೋಟು ಹಿಂಪಡೆತ ನಿರ್ಧಾರದಿಂದ ಉಂಟಾಗಿರುವ ಅವ್ಯವಸ್ಥೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರದ ನಿರ್ದೇಶನದಲ್ಲಿ ಸಿಬಿಐ ಕೆಲಸ ಮಾಡುತ್ತಿದೆ ಎಂದು ಶನಿವಾರ ದೂರಿದ್ದಾರೆ. 
"ಏರ್ ಚೀಫ್ ಮಾರ್ಷಲ್ ತ್ಯಾಗಿ ಅವರ ಬಗೆಗಿನ ಮಾಹಿತಿ ಎರಡು ವರ್ಷಗಳಿಂದ ಲಭ್ಯವಿದ್ದವು, ಆದರೂ ಅವರನ್ನು ಇಲ್ಲಿಯವರೆಗೆ ಬಂಧಿಸಿರಲಿಲ್ಲ. ಈಗ ನೋಟು ಹಿಂಪಡೆತ ನಿರ್ಧಾರದಿಂದ ಉಂಟಾಗಿರುವ ಅವ್ಯವಸ್ಥೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಅವರನ್ನು ತುರ್ತಾಗಿ ಬಂಧಿಸಲಾಗಿದೆ" ಎಂದು ಭೂಷಣ್ ಆರೋಪಿಸಿದ್ದಾರೆ. 
ಸಿಬಿಐ ಮತ್ತು ಕೇಂದ್ರ ಸರ್ಕಾರ ಭ್ರಷ್ಟಾಚಾರವನ್ನು ತೊಲಗಿಸಲು ಗಂಭೀರವಾಗಿದ್ದರೆ ಛತ್ತೀಸ್ ಘರ್, ರಾಜಸ್ಥಾನ ಮತ್ತು ಜಾರ್ಖಂಡ ರಾಜ್ಯಗಳು ಕೂಡ ಮಾಡಿಕೊಂಡಿರುವ ಅಗಸ್ಟಾ ವೆಸ್ಟ್ ಲ್ಯಾಂಡ್ ಭದ್ರತಾ ಒಪ್ಪಂದಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಮುಂದುವರೆದು ಅವರು ಹೇಳಿದ್ದಾರೆ. 
"ಅವರು ಭ್ರಷ್ಟಾಚಾರವನ್ನು ಕೊನೆಗೊಳಿಸಲು ಗಂಭೀರವಾಗಿದ್ದರೆ, ಛತ್ತೀಸ್ ಘರ್, ಜಾರ್ಖಂಡ ಮತ್ತು ರಾಜಸ್ಥಾನ ಸರ್ಕಾರಗಳು ಮಾಡಿರುವ ಅಗಸ್ಟಾ ವೆಸ್ಟ್ ಲ್ಯಾಂಡ್ ಖರೀದಿಗಳ ಬಗ್ಗೆ ಮೌನವಾಗಿರುವುದೇಕೆ" ಎಂದು ಪ್ರಶ್ನಿಸಿದ್ದಾರೆ. 
ಹೆಚ್ಚು ಬೆಲೆಗೆ ಖರೀದಿಸುವುದು ಮತ್ತು ಭ್ರಷ್ಟಾಚಾರವೆಸಗುವುದಕ್ಕೆ ಭದ್ರತಾ ಒಪ್ಪಂದಗಳು ಭಾರತದಲ್ಲಿ ಹೆಸರುವಾಸಿ ಎಂದಿರುವ ಭೂಷಣ್ "ಈಗ ಕೂಡ ರಫೇಲ್ ಒಪ್ಪಂದದಲ್ಲಿ, ಯುದ್ಧ ವಿಮಾನಗಳ ಬೆಲೆಯನ್ನು ದುಪ್ಪಟ್ಟುಗೊಳಿಸಲಾಗಿದೆ ಮತ್ತು ರಫೇಲ್ ಗೆ ೫೮೦೦೦ ಕೋಟಿ ಡೀಲ್ ನೀಡಿದ್ದು, ಅದರಲ್ಲಿ ಅರ್ಧದಷ್ಟು ಒಪ್ಪಂದವನ್ನು ಭದ್ರತಾ ಉಪಕರಣಗಳನ್ನು ಉತ್ಪಾದಿಸುವ ಯಾವುದೇ ಅನುಭವವಿಲ್ಲದ ಅನಿಲ್ ಅಂಬಾನಿ ಸಂಸ್ಥೆಗೆ ನೀಡಲಾಗಿದೆ" ಎಂದು ಕೂಡ ಭೂಷಣ್ ಆರೋಪಿಸಿದ್ದಾರೆ. 
ಬಿಜೆಪಿ ಅಧ್ಯಕ್ಷ ಅಮಿತ್ ಷಾ ಆಯ್ಕೆ ಮಾಡಿರುವ ಹಂಗಾಮಿ ಸಿಬಿಐ ನಿರ್ದೇಶಕ ಕೇಂದ್ರದ ಆದೇಶಕ್ಕೆ ತಲೆಬಾಗಿ ವರ್ತಿಸುತ್ತಿದ್ದಾರೆ ಎಂದು ಕೂಡ ಭೂಷಣ್ ಆರೋಪಿಸಿದ್ದಾರೆ. 
ಬೊಫೋರ್ಸ್ ನಂತರದ ಅತಿ ದೊಡ್ಡ ಭದ್ರತಾ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ನೆನ್ನೆ ತ್ಯಾಗಿ ಅವರನ್ನು ಬಂಧಿಸಿತ್ತು. ಇದೆ ಸಂಬಂಧದಲ್ಲಿ ದೆಹಲಿ ಮೂಲದ ವಕೀಲ ಗೌತಮ್ ಖೈತಾನ್, ಸಂಜೀವ್ ತ್ಯಾಗಿ ಅಲಿಯಾಸ್ ಜೂಲಿ ತ್ಯಾಗಿ ಅವರುಗಳನ್ನು ಕೂಡ ಬಂಧಿಸಲಾಗಿದೆ. ಈ ಮೂವರು ಈ ಭ್ರಷ್ಟಾಚಾರದ ಪ್ರಕರಣದಲ್ಲಿ ಲಂಚ ಸ್ವೀಕರಿಸಿದ್ದಾರೆ ಎಂದು ಆರೋಪಪಟ್ಟಿ ಸಲ್ಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT