ಹಿರಿಯ ವಕೀಲ ಪ್ರಶಾಂತ್ ಭೂಷಣ್ 
ಪ್ರಧಾನ ಸುದ್ದಿ

ಡಿಮಾನೆಟೈಸೇಷನ್ ನಿಂದ ಗಮನ ಬೇರೆಡೆ ಸೆಳೆಯಲು ಕೇಂದ್ರದಿಂದ ಸಿಬಿಐ ದುರ್ಬಳಕೆ: ಭೂಷಣ್

ಅಗಸ್ಟಾ ವೆಸ್ಟ್ ಲ್ಯಾಂಡ್ ಒಪ್ಪಂದ ಪ್ರಕರಣದಲ್ಲಿ ಮಾಜಿ ಏರ್ ಚೀಫ್ ಮಾರ್ಷಲ್ ಎಸ್ ಪಿ ತ್ಯಾಗಿ ಅವರನ್ನು ಸಿಬಿಐ ಬಂಧಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್,

ನೋಯ್ಡಾ: ಅಗಸ್ಟಾ ವೆಸ್ಟ್ ಲ್ಯಾಂಡ್ ಒಪ್ಪಂದ ಪ್ರಕರಣದಲ್ಲಿ ಮಾಜಿ ಏರ್ ಚೀಫ್ ಮಾರ್ಷಲ್ ಎಸ್ ಪಿ ತ್ಯಾಗಿ ಅವರನ್ನು ಸಿಬಿಐ ಬಂಧಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, ನೋಟು ಹಿಂಪಡೆತ ನಿರ್ಧಾರದಿಂದ ಉಂಟಾಗಿರುವ ಅವ್ಯವಸ್ಥೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರದ ನಿರ್ದೇಶನದಲ್ಲಿ ಸಿಬಿಐ ಕೆಲಸ ಮಾಡುತ್ತಿದೆ ಎಂದು ಶನಿವಾರ ದೂರಿದ್ದಾರೆ. 
"ಏರ್ ಚೀಫ್ ಮಾರ್ಷಲ್ ತ್ಯಾಗಿ ಅವರ ಬಗೆಗಿನ ಮಾಹಿತಿ ಎರಡು ವರ್ಷಗಳಿಂದ ಲಭ್ಯವಿದ್ದವು, ಆದರೂ ಅವರನ್ನು ಇಲ್ಲಿಯವರೆಗೆ ಬಂಧಿಸಿರಲಿಲ್ಲ. ಈಗ ನೋಟು ಹಿಂಪಡೆತ ನಿರ್ಧಾರದಿಂದ ಉಂಟಾಗಿರುವ ಅವ್ಯವಸ್ಥೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಅವರನ್ನು ತುರ್ತಾಗಿ ಬಂಧಿಸಲಾಗಿದೆ" ಎಂದು ಭೂಷಣ್ ಆರೋಪಿಸಿದ್ದಾರೆ. 
ಸಿಬಿಐ ಮತ್ತು ಕೇಂದ್ರ ಸರ್ಕಾರ ಭ್ರಷ್ಟಾಚಾರವನ್ನು ತೊಲಗಿಸಲು ಗಂಭೀರವಾಗಿದ್ದರೆ ಛತ್ತೀಸ್ ಘರ್, ರಾಜಸ್ಥಾನ ಮತ್ತು ಜಾರ್ಖಂಡ ರಾಜ್ಯಗಳು ಕೂಡ ಮಾಡಿಕೊಂಡಿರುವ ಅಗಸ್ಟಾ ವೆಸ್ಟ್ ಲ್ಯಾಂಡ್ ಭದ್ರತಾ ಒಪ್ಪಂದಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಮುಂದುವರೆದು ಅವರು ಹೇಳಿದ್ದಾರೆ. 
"ಅವರು ಭ್ರಷ್ಟಾಚಾರವನ್ನು ಕೊನೆಗೊಳಿಸಲು ಗಂಭೀರವಾಗಿದ್ದರೆ, ಛತ್ತೀಸ್ ಘರ್, ಜಾರ್ಖಂಡ ಮತ್ತು ರಾಜಸ್ಥಾನ ಸರ್ಕಾರಗಳು ಮಾಡಿರುವ ಅಗಸ್ಟಾ ವೆಸ್ಟ್ ಲ್ಯಾಂಡ್ ಖರೀದಿಗಳ ಬಗ್ಗೆ ಮೌನವಾಗಿರುವುದೇಕೆ" ಎಂದು ಪ್ರಶ್ನಿಸಿದ್ದಾರೆ. 
ಹೆಚ್ಚು ಬೆಲೆಗೆ ಖರೀದಿಸುವುದು ಮತ್ತು ಭ್ರಷ್ಟಾಚಾರವೆಸಗುವುದಕ್ಕೆ ಭದ್ರತಾ ಒಪ್ಪಂದಗಳು ಭಾರತದಲ್ಲಿ ಹೆಸರುವಾಸಿ ಎಂದಿರುವ ಭೂಷಣ್ "ಈಗ ಕೂಡ ರಫೇಲ್ ಒಪ್ಪಂದದಲ್ಲಿ, ಯುದ್ಧ ವಿಮಾನಗಳ ಬೆಲೆಯನ್ನು ದುಪ್ಪಟ್ಟುಗೊಳಿಸಲಾಗಿದೆ ಮತ್ತು ರಫೇಲ್ ಗೆ ೫೮೦೦೦ ಕೋಟಿ ಡೀಲ್ ನೀಡಿದ್ದು, ಅದರಲ್ಲಿ ಅರ್ಧದಷ್ಟು ಒಪ್ಪಂದವನ್ನು ಭದ್ರತಾ ಉಪಕರಣಗಳನ್ನು ಉತ್ಪಾದಿಸುವ ಯಾವುದೇ ಅನುಭವವಿಲ್ಲದ ಅನಿಲ್ ಅಂಬಾನಿ ಸಂಸ್ಥೆಗೆ ನೀಡಲಾಗಿದೆ" ಎಂದು ಕೂಡ ಭೂಷಣ್ ಆರೋಪಿಸಿದ್ದಾರೆ. 
ಬಿಜೆಪಿ ಅಧ್ಯಕ್ಷ ಅಮಿತ್ ಷಾ ಆಯ್ಕೆ ಮಾಡಿರುವ ಹಂಗಾಮಿ ಸಿಬಿಐ ನಿರ್ದೇಶಕ ಕೇಂದ್ರದ ಆದೇಶಕ್ಕೆ ತಲೆಬಾಗಿ ವರ್ತಿಸುತ್ತಿದ್ದಾರೆ ಎಂದು ಕೂಡ ಭೂಷಣ್ ಆರೋಪಿಸಿದ್ದಾರೆ. 
ಬೊಫೋರ್ಸ್ ನಂತರದ ಅತಿ ದೊಡ್ಡ ಭದ್ರತಾ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ನೆನ್ನೆ ತ್ಯಾಗಿ ಅವರನ್ನು ಬಂಧಿಸಿತ್ತು. ಇದೆ ಸಂಬಂಧದಲ್ಲಿ ದೆಹಲಿ ಮೂಲದ ವಕೀಲ ಗೌತಮ್ ಖೈತಾನ್, ಸಂಜೀವ್ ತ್ಯಾಗಿ ಅಲಿಯಾಸ್ ಜೂಲಿ ತ್ಯಾಗಿ ಅವರುಗಳನ್ನು ಕೂಡ ಬಂಧಿಸಲಾಗಿದೆ. ಈ ಮೂವರು ಈ ಭ್ರಷ್ಟಾಚಾರದ ಪ್ರಕರಣದಲ್ಲಿ ಲಂಚ ಸ್ವೀಕರಿಸಿದ್ದಾರೆ ಎಂದು ಆರೋಪಪಟ್ಟಿ ಸಲ್ಲಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT