ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ವರ್ಧಾ ಎಫೆಕ್ಟ್: ಚೆನ್ನೈನಲ್ಲಿ ಪ್ರವಾಹ ಭೀತಿ, ವಿಮಾನ ಸಂಚಾರ ಸ್ಥಗಿತ!

ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿರುವ ವರ್ಧಾ ಚಂಡಮಾರುತ ಪರಿಣಾಮ ರಾಜಧಾನಿ ಚೆನ್ನೈ ನಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಆರಂಭವಾಗಿದೆ.

ಚೆನ್ನೈ: ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿರುವ ವರ್ಧಾ ಚಂಡಮಾರುತ ಪರಿಣಾಮ ರಾಜಧಾನಿ ಚೆನ್ನೈ ನಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಆರಂಭವಾಗಿದೆ.

ಮುಂಜಾನೆಯಿಂದಲೇ ಚೆನ್ನೈನಾದ್ಯಂತ ಭಾರಿಮಳೆಯಾಗುತ್ತಿದ್ದು, ರಸ್ತೆಗಳೆಲ್ಲಾ ಜಲಾವೃತ್ತವಾಗಿವೆ. ಪರಿಣಾಮ ಚೆನ್ನೈನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸಂಚಾರ ತೀವ್ರ ಅಸ್ತವ್ಯಸ್ಥವಾಗಿದೆ. ಚೆನ್ನೈನಲ್ಲಿನ  ಪ್ರತೀಕೂಲ ಹವಾಮಾನದಿಂದಾಗಿ ವಿಮಾನ ಸಂಚಾರದಲ್ಲೂ ಭಾರಿ ವ್ಯತ್ಯಯವಾಗಿದ್ದು, ಈಗಾಗಲೇ ಸುಮಾರು 15 ವಿಮಾನಗಳು ಸಂಚಾರ ರದ್ದುಗೊಳಿಸಿವೆ. ಅಂತೆಯೇ ಚೆನ್ನೈಗೆ ಆಗಮಿಸಬೇಕಿದ್ದ 25 ವಿಮಾನಗಳ ಮಾರ್ಗ  ಬದಲಾವಣೆ ಮಾಡಲಾಗಿದ್ದು, ಚೆನ್ನೈಗೆ ಆಗಮಿಸಬೇಕಿದ್ದ 9 ವಿಮಾನಗಳ ಸಮಯದಲ್ಲಿ ಭಾರಿ ವಿಳಂಬವಾಗಿದೆ.

ವರ್ಧಾ ಚಂಡಮಾರುತ ಪರಿಣಾಮ ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಮನೆ ಬಿಟ್ಟು ಹೊರಗೆ ಬರದಂತೆ ಚೆನ್ನೈನ ಕಡಲ ತೀರದ ನಿವಾಸಿಗಳಿಗೆ ಸೂಚನೆ ನೀಡಲಾಗಿದೆ. ಅಂತೆಯೇ ಚೆನ್ನೈನ ಎಲ್ಲ  ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಖಾಸಗಿ ಕಂಪನಿಗಳಿಗ ನೌಕರರಿಗೆ ರಜೆ ನೀಡುವಂತೆ ಅಥವಾ ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ನೀಡುವಂತೆ ಕಂಪನಿಗಳಿಗೆ ತಮಿಳುನಾಡ ಸರ್ಕಾರ ಮನವಿ  ಮಾಡಿದೆ.

ಚೆನ್ನೈನಲ್ಲಿ ಬೀಸುತ್ತಿರುವ ಬಿರುಗಾಳಿ ಹಾಗೂ ಮಳೆ ಪರಿಣಾಮ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು, ಹಲವೆಡೆ ಮರಗಳು ಧರೆಗುರುಳಿರುವ ಘಟನೆ ನಡೆದಿದೆ. ಪ್ರಸ್ತುತ ಚೆನ್ನೈ ಕರಾವಳಿ ತೀರದಿಂದ ಚಂಡಮಾರುತ  ಸುಮಾರು 105 ಕಿ.ಮೀ ದೂರದಲ್ಲಿದ್ದು, ಪ್ರತೀ ಗಂಟೆಗೆ 100-101 ಕಿ.ಮೀ ವೇಗದಲ್ಲಿ ಧಾವಿಸುತ್ತಿದೆ ಎಂದು ಹವಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ವೈಪರೀತ್ಯವನ್ನು ಎದುರಿಸಲು ಚೆನ್ನೈನಲ್ಲಿ ಹಾಗೂ ದಕ್ಷಿಣ  ಆಂಧ್ರ ಪ್ರದೇಶದಲ್ಲಿ ಬೀಡು ಬಿಟ್ಟಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಹಾಗೂ ಅಗ್ನಿಶಾಮಕ ದಳಗಳು ಸರ್ವ ಸನ್ನದ್ಧವಾಗಿದ್ದು, ಈಗಾಗಲೇ ಸುಮಾರು 25ಕ್ಕೂ ಅಧಿಕ ನುರಿತ ಈಜು ತಜ್ಞರನ್ನು ಕಾರ್ಯಾಚರಣೆಗೆ  ನಿಯೋಜಿಸಲಾಗಿದೆ.

ಚೆನ್ನೈಗೆ ಪ್ರವಾಹ ಭೀತಿ
ಇನ್ನು ಚಂಡಮಾರುತ ಪರಿಣಾಮ ಇಂದು ಮುಂಜಾನೆಯಿಂದಲೇ ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದ್ದು, ಚೆನ್ನೈನ ರಸ್ತೆಗಳು ನೀರಿನಲ್ಲಿ ಜಲಾವೃತ್ತವಾಗಿವೆ. ಪ್ರಸ್ತುತ ಬೀಳುತ್ತಿರುವ ಭಾರಿ 2015ರ ಪ್ರವಾಹ ಪರಿಸ್ಥಿತಿಯನ್ನು  ನೆನಪಿಸುತ್ತಿದ್ದು, ಮತ್ತೆ ಚೆನ್ನೈನಲ್ಲಿ ಪ್ರವಾಹ ಎದುರಾಗುವ ಭೀತಿ ಸೃಷ್ಟಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT