ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ಪ್ರಧಾನ ಸುದ್ದಿ

'ಡಿಜಿಟಲ್ ಇಂಡಿಯಾ' ಅಭಿಯಾನದ ಸುರಕ್ಷತೆಯನ್ನು ಪ್ರಶ್ನಿಸಿದ ಮಮತಾ

ಕೆಲವು ಹಿರಿಯ ಪತ್ರಕರ್ತರ ಈಮೇಲ್ ಮತ್ತು ಟ್ವಿಟ್ಟರ್ ಖಾತೆಗಳನ್ನು ಹ್ಯಾಕ್ ಮಾಡಿ ಅವರ ವೈಯಕ್ತಿಕ ವಿವರಗಳನ್ನು ಕದ್ದಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 'ಡಿಜಿಟಲ್ ಇಂಡಿಯಾ' ಅಭಿಯಾನದ

ಕೋಲ್ಕತ್ತಾ: ಕೆಲವು ಹಿರಿಯ ಪತ್ರಕರ್ತರ ಈಮೇಲ್ ಮತ್ತು ಟ್ವಿಟ್ಟರ್ ಖಾತೆಗಳನ್ನು ಹ್ಯಾಕ್ ಮಾಡಿ ಅವರ ವೈಯಕ್ತಿಕ ವಿವರಗಳನ್ನು ಕದ್ದಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 'ಡಿಜಿಟಲ್ ಇಂಡಿಯಾ' ಅಭಿಯಾನದ ಸುರಕ್ಷತೆಯನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. 
ಇದು ಪ್ರತಿಭಟನೆಗಳನ್ನು ಬೆದರಿಸುವ ಮತ್ತು ಹತ್ತಿಕ್ಕಲು ನಡೆಸುತ್ತಿರುವ ಹುನ್ನಾರ ಎಂದು ಕೂಡ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಬ್ಯಾನರ್ಜಿ ಆರೋಪಿಸಿದ್ದಾರೆ. 
"ಪತ್ರಕರ್ತರ ಖಾತೆಗಳು ಮತ್ತು ಬ್ಯಾಂಕ್ ವಿವರಗಳನ್ನು ಹ್ಯಾಕ್ ಮಾಡಿರುವ ವರದಿಗಳನ್ನು ನೋಡುತ್ತಿದ್ದೇನೆ. ಇದು ಸಾರ್ವಜನಿಕ ಹಿತಾಸಕ್ತಿಗಾಗಿ ಮಾಡಿರುವುದಲ್ಲ... ಇದು ಖಾಸಗಿತನದ ಉಲ್ಲಂಘನೆ. ಇದು ಪ್ರತಿಭಟನೆಗಳನ್ನು ಬೆದರಿಸುವ ಮತ್ತು ಹತ್ತಿಕ್ಕಲು ನಡೆಸುತ್ತಿರುವ ಪ್ರಯತ್ನ. ಸರ್ಕಾರ ಡಿಜಿಟಲ್ ಜೀವನವನ್ನು ಅಳವಡಿಸಿಕೊಳ್ಳಲು ಹೇಳುತ್ತಿದೆ ಮತ್ತು ಇದು ಸುರಕ್ಷ ಎಂದು ಕೂಡ ಹೇಳುತ್ತಿದೆ" ಎಂದು ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ. 
ಲೆಜನ್ ಎಂದು ಕರೆದುಕೊಂಡ ಒಂದು ಗುಂಪಿನಿಂದ ಇತ್ತೀಚಿಗೆ ಹಿರಿಯ ಪತ್ರಕರ್ತರಾದ ಬರ್ಖಾ ದತ್ ಮತ್ತು ರವೀಶ್ ಕುಮಾರ್ ಅವರ ಟ್ವಿಟ್ಟರ್ ಖಾತೆಗಳನ್ನು ಹ್ಯಾಕ್ ಮಾಡಲಾಗಿತ್ತು. ಇದೆ ಗುಂಪು ಇದಕ್ಕೂ ಮುಂಚಿತವಾಗಿ ವಿಜಯ್ ಮಲ್ಯ ಮತ್ತು ರಾಹುಲ್ ಗಾಂಧಿ ಖಾತೆಗಳನ್ನು ಕೂಡ ಹ್ಯಾಕ್ ಮಾಡಿತ್ತು. 
"ಇದು ಅಷ್ಟು ಸುರಕ್ಷವಾಗಿದ್ದರೆ, ಪತ್ರಕರ್ತರ ಬ್ಯಾಂಕ್ ವಿವರಗಳನ್ನು ಲಕ್ಷಾಂತರ ಹ್ಯಾಕರ್ ಗಳಿಗೆ ಬಹಿರಂಗಪಡಿಸಲು ಹೇಗೆ ಸಾಧ್ಯ? ಡಿಜಿಟಲ್ ಇಂಡಿಯಾ ಅಭಿಯಾನದ ಕುಂದು ಕೊರತೆಗಳು ಬಯಲಾಗಿವೆ" ಎಂದು ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT