ಸಚಿವ ಎಚ್.ವೈ ಮೇಟಿ 
ಪ್ರಧಾನ ಸುದ್ದಿ

ಸರ್ಕಾರಿ ಕಟ್ಟಡವೊಂದರಲ್ಲಿ ಸಚಿವರು ರಾಸಲೀಲೆ ನಡೆಸಿದ್ದಾರೆ: ಆರ್ ಟಿಐ ಕಾರ್ಯಕರ್ತ

ಅಬಕಾರಿ ಸಚಿವ ಎಚ್‌.ವೈ.ಮೇಟಿ ಅವರು ಸರ್ಕಾರಿ ಕಟ್ಟಡವೊಂದರಲ್ಲಿ ರಾಸಲೀಲೆ ನಡೆಸಿದ್ದು, ಆ ಕಟ್ಟಡ ಯಾವುದು ಎಂದು ನನಗೂ ಗೊತ್ತಿಲ್ಲ ಆರ್ ಟಿಐ ಕಾರ್ಯಕರ್ತ...

ಬಳ್ಳಾರಿ: ಅಬಕಾರಿ ಸಚಿವ ಎಚ್‌.ವೈ.ಮೇಟಿ ಅವರು ಸರ್ಕಾರಿ ಕಟ್ಟಡವೊಂದರಲ್ಲಿ ರಾಸಲೀಲೆ ನಡೆಸಿದ್ದು, ಆ ಕಟ್ಟಡ ಯಾವುದು ಎಂದು ತಮಗೂ ಗೊತ್ತಿಲ್ಲ ಎಂದು ಆರ್ ಟಿಐ ಕಾರ್ಯಕರ್ತ ರಾಜಶೇಖರ್ ಅವರು ಸೋಮವಾರ ಹೇಳಿದ್ದಾರೆ.
ಇಂದು ಬಳ್ಳಾರಿಯ ಕೆಎಂಎಫ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜಶೇಖರ್ ಅವರು, ಸಚಿವರು ರಾಸಲೀಲೆ ನಡೆಸಿದ ಸಿಡಿ ನನ್ನ ಬಳಿ ಇಲ್ಲ. ಆದರೆ ನಾನು ವಿಡಿಯೋ ನೋಡಿದ್ದೇನೆ ಎಂದರು.
ಇನ್ನು ಸಿಡಿಯಲ್ಲಿ ಏನಿತ್ತು ಎಂದು ವಿವರಿಸಿ ಎಂದು ವರದಿಗಾರರು ಕೇಳಿದಾಗ, ಆ ಸಿಡಿಯಲ್ಲಿರುವ ಸಚಿವರ ರಾಸಲೀಲೆಯ ದೃಶ್ಯ ನೋಡಿದರೆ ನನಗೂ ಬೇಸರವಾಗುತ್ತೆ. ಅಷ್ಟು ಅಸಹ್ಯವಾಗಿದೆ. ಅದನ್ನು ಇಲ್ಲಿ ವಿವರಿಸುವುದು ಅಸಾಧ್ಯ. ಹೀಗಾಗಿ ಅಂತಹ ಸಚಿವರು ನಮಗೆ ಬೇಡ. ಅವರನ್ನು ಕೂಡಲೇ ವಜಾ ಮಾಡಬೇಕು ಎಂದು ಮನವಿ ಮಾಡಿದರು.
ನಾನು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೇರಿದ ವ್ಯಕ್ತಿಯಲ್ಲ. ಉತ್ತಮ ಸಮಾಜಕ್ಕಾಗಿ ನಾನು ಹೋರಾಡುತ್ತಿದ್ದೇನೆ. ಸಚಿವ ಮೇಟಿ ಅವರ ರಾಸಲೀಲೆ ಪ್ರಕರಣ ಸಂಬಂಧ ಮೊದಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ವರದಿ ಸಲ್ಲಿಸುತ್ತೇನೆ. ನಂತರ ಎಐಸಿಸಿಗೂ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಸಂಬಂಧ ಗೃಹ ಸಚಿವ ಪರಮೇಶ್ವರ ಅವರ ಭೇಟಿಗೂ ಅವಕಾಶ ಕೋರಿದ್ದು, ಒಂದು ವೇಳೆ ಅವರು ಅವಕಾಶ ನೀಡಿದರೆ ಭೇಟಿಯಾಗವುದಾಗಿ ರಾಜಶೇಖರ್ ಹೇಳಿದ್ದಾರೆ.
ಇದೇ ವೇಳೆ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದ್ದು, ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು. ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಚೇತನ್ ಅವರು ಸಹ ಒಬ್ಬ ದಕ್ಷ್ಯ ಅಧಿಕಾರಿಯಾಗಿದ್ದು, ನನಗೆ ಜೀವ ಬೇದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದರು. 
ರಾಜಶೇಖರ್ ಅವರು ನಿನ್ನೆಯಷ್ಟೇ ಸಚಿವರ ರಾಸಲೀಲೆ ನಡೆಸಿದ ಸಿಡಿ ಬಿಡುಗಡೆ ಮಾಡದಂತೆ ಅವರ ಬೆಂಬಲಿಗರು ತಮಗೆ ಜೀವ ಬೆದರಿಕೆ ಹಾಕಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ರಾಜಶೇಖರ್‌ಗೆ ಬೆದರಿಕೆ ಒಡ್ಡಿದ ವ್ಯಕ್ತಿ ಅಬಕಾರಿ ಸಚಿವ ಎಚ್‌.ವೈ.ಮೇಟಿ ಅವರ ಹೆಸರು ಹೇಳಿರುವುದು ಮಾಧ್ಯಮಗಳಲ್ಲಿ ಪ್ರಸಾರವಾದ ಆಡಿಯೋದಲ್ಲಿ ಕೇಳಿ ಬಂದಿದೆ. ಬೇಕಾದ್ರೆ ಹಣ ತೆಗೊಳ್ಳಿ ಸಿಡಿ ಬಿಡುಗಡೆ ಮಾಡಬೇಡಿ. ಮಾಡಿದ್ರೆ ನಿಮಗೆ ನಿಮ್ಮನೆಯವ್ರಿಗೆ ಚೆನ್ನಾಗಿರಲ್ಲ ಎಂದು ಬೆದರಿಕೆ ಒಡ್ಡಲಾಗಿದೆ.
ಸಹಾಯ ಯಾಚಿಸಿ ಬಂದ 24 ರ ಹರೆಯದ ಯುವತಿಯೊಂದಿಗೆ 70 ರ ಹರೆಯದಲ್ಲಿರುವ ಮೇಟಿ ಅವರು ಸೆಕ್ಸ್‌ ನಡೆಸಿದ್ದು ಇದನ್ನು ರಹಸ್ಯ ಕ್ಯಾಮರಾದಲ್ಲಿ ಚಿತ್ರೀಕರಿಸಲಾಗಿದೆ ಎಂದು ತಿಳಿದು ಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT