ಚೆನ್ನೈಗೆ ಅಪ್ಪಳಿಸಿದ ವರ್ಧಾ ಚಂಡಮಾರುತ 
ಪ್ರಧಾನ ಸುದ್ದಿ

ವರ್ಧಾ ಚಂಡಮಾರುತಕ್ಕೆ ನಲುಗಿದ ಚೆನ್ನೈ; ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಸೋಮವಾರ ಅಪ್ಪಳಿಸಿದ ವರ್ಧಾ ಚಂಡಮಾರುತದಿಂದಾಗಿ ಚೆನ್ನೈ ನಗರ ಸಂಪೂರ್ಣ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಚೆನ್ನೈ: ಸೋಮವಾರ ಅಪ್ಪಳಿಸಿದ ವರ್ಧಾ ಚಂಡಮಾರುತದಿಂದಾಗಿ ಚೆನ್ನೈ ನಗರ ಸಂಪೂರ್ಣ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಭಾರಿ ಮಳೆ ಹಾಗೂ ಬಿರುಗಾಳಿಯಿಂದಾಗಿ ಚೆನ್ನೈ ಹೊರವಲಯದಲ್ಲಿ ಭೂಕುಸಿತವಾಗಿದ್ದು, ಸುಮಾರ 120ರಿಂದ 130 ಕಿಮೀ ವೇಗದಲ್ಲಿ ಬೀಸಿದ ಗಾಳಿ ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಹಾನಿಯುಂಟು ಮಾಡಿದೆ ಎಂದು  ತಿಳಿದುಬಂದಿದೆ. ಅಂತೆಯೇ ಮುಂದಿನ 12 ಗಂಟೆಗಳಲ್ಲಿ ಚೆನ್ನೈನಾದ್ಯಂತ ಭಾರಿ ಮಳೆಯಾಗುವ ಕುರಿತು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚೆನ್ನೈ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು,  ತಗ್ಗು ಪ್ರದೇಶಗಳಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 20 ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸಲಾಗಿದೆ.

ಇನ್ನು ವರ್ಧಾ ಚಂಡಮಾರುತಕ್ಕೆ ಸುಮಾರು 10 ಮಂದಿ ಬಲಿಯಾಗಿದ್ದು, ಚೆನ್ನೈನಗರದಲ್ಲಿ 4 ಮತ್ತು ಕಾಂಚಿಪುರಂ, ತಿರುವಳ್ಳೂರ್ ನಲ್ಲಿ ತಲಾ ಎರಡು ಹಾಗೂ ವಿಳ್ಳುಪುರಂ ಮತ್ತು ನಾಗಪಟ್ಟಣಂನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ  ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವರ್ಧಾ ಚಂಡಮಾರುತದಿಂದಾಗಿ ರಾಜಧಾನಿ ಚೆನ್ನೈ ನಗರಾದ್ಯಂತ ಸುಮಾರು 1500ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, ಸಿಎಂ ಪನ್ನೀರ್ ಸೆಲ್ವಂ ಅವರು  ಅಧಿಕಾರಿಗಳೊಂದಿಗೆ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

ಸಂತ್ರಸ್ತರ ಕುಟುಂಬಕ್ಕೆ ಪರಿಹಾರ
ಅಂತೆಯೇ ಪ್ರಕೃತಿ ವಿಕೋಪಕ್ಕೆ ಬಲಿಯಾದವರ ಕುಟುಂಬಗಳಿಗೆ ತಲಾ 4 ಲಕ್ಷ ಹಣ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಣೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT