ಎಚ್.ವೈ.ಮೇಟಿ 
ಪ್ರಧಾನ ಸುದ್ದಿ

ಕೊನೆಗೂ ರಾಸಲೀಲೆ ಸಿಡಿ ಬಿಡುಗಡೆ, ಸಚಿವ ಸ್ಥಾನಕ್ಕೆ ಎಚ್.ವೈ. ಮೇಟಿ ರಾಜಿನಾಮೆ

ಕೊನೆಗೂ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರು ನಡೆಸಿದ ರಾಸಲೀಲೆ ಸಿಡಿ ಬುಧವಾರ ಮಾಧ್ಯಮಗಳಲ್ಲಿ ಬಿಡುಗಡೆಯಾಗಿದ್ದು, ಸಚಿವ ಸ್ಥಾನಕ್ಕೆ ರಾಜಿನಾಮೆ...

ಬೆಂಗಳೂರು: ಕೊನೆಗೂ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರು ನಡೆಸಿದ ರಾಸಲೀಲೆ ಸಿಡಿ ಬುಧವಾರ ಮಾಧ್ಯಮಗಳಲ್ಲಿ ಬಿಡುಗಡೆಯಾಗಿದ್ದು, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಈ ಹಿಂದೆ ತಮ್ಮ ವಿರುದ್ಧದ ರಾಸಲೀಲೆ ಸಿಡಿ ಬಿಡುಗಡೆಯಾದರೆ, ತಾನು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಮೇಟಿ ಹೇಳಿದ್ದರು. ಅದರಂತೆ ಈಗ ಸಿಡಿ ಬಿಡುಗಡೆಯಾಗುತ್ತಿದ್ದಂತೆ ಮೇಟಿ ಅವರು ರಾಜಿನಾಮೆ ಪತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ, ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿಎಂ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಮೇಟಿ ಅವರಿಗೆ ಸೂಚಿಸಿದ್ದು, ಸಿಎಂ ಸೂಚನೆಯಂತೆ ರಾಜಿನಾಮೆ ನೀಡಿದ್ದಾರೆ. 
ಬಳಿಕ ಸಿಎಂ ಸಚಿವರ ರಾಜಿನಾಮೆ ಪತ್ರವನ್ನು ರಾಜಭವನಕ್ಕೆ ರವಾನಿಸಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ.
ರಾಸಲೀಲೆ ಸಿಡಿಯೇ ಇಲ್ಲ ಎಂದು ಮೇಟಿ ಸಾರಸಗಟಾಗಿ ಅಲ್ಲಗಳೆದಿದ್ದರು. ಆ ನಿಟ್ಟಿನಲ್ಲಿ ಈಗ ರಾಸಲೀಲೆ ಸಿಡಿ ಇರೋದು ಸತ್ಯವಾಗಿದೆ. ಸಚಿವರ ರಾಸಲೀಲೆಯದ್ದು ಎನ್ನಲಾದ ಸಿಡಿ 3 ನಿಮಿಷ 23ಸೆಕೆಂಡ್ ಇದೆ. ಆರ್ ಟಿಐ ಕಾರ್ಯಕರ್ತ ರಾಜಶೇಖರ್ ಅವರು ನವದೆಹಲಿಯಲ್ಲಿ ಸಿಡಿಯನ್ನು ಬಿಡುಗಡೆ ಮಾಡಿರುವುದಾಗಿ ಮಾಧ್ಯಮಗಳು ವರದಿ ಮಾಡುತ್ತಿವೆ.
ಸರ್ಕಾರಿ ಕಚೇರಿಯಲ್ಲಿ ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕದಲ್ಲಿ ತೊಡಗಿರುವ ದೃಶ್ಯ ಸಿಡಿಯಲ್ಲಿ ದಾಖಲಾಗಿದೆ. ಸಿಡಿಯಲ್ಲಿ ಎಚ್.ವೈ.ಮೇಟಿ ಮತ್ತು ಮಹಿಳೆ ಸಂಭಾಷಣೆ ಅಸ್ಪಷ್ಟವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT