ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಲಷ್ಕರ್ ಹಿರಿಯ ಕಮಾಂಡರ್ ಸೇರಿದಂತೆ ಜಮ್ಮು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

ಭದ್ರತಾ ಪಡೆಗಳ ಜೊತೆಗೆ ನಡೆದ ಎರಡು ವಿಭಿನ್ನ ಎನ್ಕೌಂಟರ್ ಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ಶ್ರೀನಗರ: ಭದ್ರತಾ ಪಡೆಗಳ ಜೊತೆಗೆ ನಡೆದ ಎರಡು ವಿಭಿನ್ನ ಎನ್ಕೌಂಟರ್ ಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. 
ಅನಂತನಾಗ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಈ ಎನ್ಕೌಂಟರ್ ನಡೆದಿದೆ. ಅನಂತನಾಗ್ ಜಿಲ್ಲೆಯ ಶ್ರೀಗುಫ್ವರದಲ್ಲಿ ಬೆಳಗ್ಗೆ ಸೇನೆಯ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಸೇನೆ ಪ್ರತಿಕ್ರಯಿಸಿದ್ದರಿಂದ, ಬಸಿತ್ ಅಹ್ಮದ್ ದರ್ ಎಂದು ಗುರುತಿಸಲಾಗಿರುವ ಭಯೋತ್ಪಾದಕ ಹತ್ಯೆಯಾಗಿದ್ದಾನೆ. 
ದರ್ ಇತೀಚೆಗಷ್ಟೇ ಹಿಜಬುಲ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆ ಸೇರಿದ್ದ. 
ಮತ್ತೊಂದು ಎನ್ಕೌಂಟರ್ ನಲ್ಲಿ ವಿದೇಶಿ ಭಯೋತ್ಪಾದಕ ಎಂದು ನಂಬಲಾದ ಒಬ್ಬನನ್ನು ಬಾರಾಮುಲ್ಲಾ ಜಿಲ್ಲೆಯ, ಸೋಪೋರ್ ನ ಬೊಮೈನಲ್ಲಿ ಹತ್ಯೆಗೈಯ್ಯಲಾಗಿದೆ. 
ಇವನ ಗುರುತು ಮತ್ತು ಇವನು ಸೇರಿದ ಭಯೋತ್ಪಾದಕ ಸಂಘಟನೆಯ ಗುರುತು ಇನ್ನು ಸಿಗಬೇಕಿದೆ. 
ಆದರೆ ಪೊಲೀಸ್ ಮೂಲಗಳ ಪ್ರಕಾರ ಹತ್ಯೆಯಾದ ಭಯೋತ್ಪಾದಕ, ಲಷ್ಕರ್ ಎ ತೈಬಾದ ಹಿರಿಯ ಕಮಾಂಡರ್ ಅಬು ಬಕರ್ ಎಂದು ತಿಳಿದುಬಂದಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ-ಅಮೇರಿಕಾ ಆಪ್ತ ಸ್ನೇಹಿತರು, ನಿಮ್ಮೊಂದಿಗೆ ಮಾತನಾಡಲು ನಾನೂ ಉತ್ಸುಕನಾಗಿದ್ದೇನೆ: ಟ್ರಂಪ್'ಗೆ ಪ್ರಧಾನಿ ಮೋದಿ

ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆ: ಪ್ರಧಾನಿ ಮೋದಿ ಜೊತೆ ಮಾತನಾಡಲು ಚಡಪಡಿಸುತ್ತಿರುವ ಟ್ರಂಪ್

ನೇಪಾಳದಲ್ಲಿ ಹಿಂಸಾಚಾರ: ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಸಿದ್ದರಾಮಯ್ಯ

Digital Arrest: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್ ಗೆ 30 ಲಕ್ಷ ರೂ. ಪಂಗನಾಮ ಹಾಕಿದ ವಂಚಕರು!

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: 'ಕೈ' ಶಾಸಕ ಸತೀಶ್ ಸೈಲ್ ಬಂಧನ

SCROLL FOR NEXT