ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಸೇನಾ ಪಡೆಗಳಲ್ಲಿ ಧರ್ಮದ ಆಧಾರದ ಮೇಲೆ ಗಡ್ಡ ಬೆಳೆಸಲು ಅವಕಾಶವಿಲ್ಲ: ಸುಪ್ರೀಂ ಕೋರ್ಟ್

ಗಡ್ಡ ಬೆಳೆಸಲು ಅವಕಾಶ ಕೋರಿ ಇಬ್ಬರು ಐ ಎ ಎಫ್ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ವೈಯಕ್ತಿಕ ನೋಟ ಮತ್ತು ಶೈಲಿಯ ಬಗ್ಗೆ ಇರುವ ಐ ಎ ಎಫ್ ನೀತಿಗಳು ಧಾರ್ಮಿಕ

ನವದೆಹಲಿ: ಗಡ್ಡ ಬೆಳೆಸಲು ಅವಕಾಶ ಕೋರಿ ಇಬ್ಬರು ಐ ಎ ಎಫ್ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ವೈಯಕ್ತಿಕ ನೋಟ ಮತ್ತು ಶೈಲಿಯ ಬಗ್ಗೆ ಇರುವ ಐ ಎ ಎಫ್ ನೀತಿಗಳು ಧಾರ್ಮಿಕ ನಂಬಿಕೆಗಳ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ ಎಂದಿದೆ. 
ಮೊಹಮದ್ ಜುಬೈರ್ ಮತ್ತು ಅನ್ಸಾರಿ ಆಫ್ತಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ, ನ್ಯಾಯಾಧೀಶ ಟಿ ಎಸ ಠಾಕೂರ್, ನ್ಯಾಯಾಧೀಶ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಾಧೀಶ ಎಲ್ ನಾಗೇಶ್ವರ ರಾವ್ ಇವರುಗಳನ್ನು ಒಳಗೊಂಡ ಪೀಠ "ವೈಯಕ್ತಿಕ ನೋಟ ಮತ್ತು ಶೈಲಿಯ ಬಗ್ಗೆ ಇರುವ ಐ ಎ ಎಫ್ ನೀತಿಗಳು ಧಾರ್ಮಿಕ ನಂಬಿಕೆಗಳ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ ಮತ್ತು ಅಂತಹ ಆಶಯ ಕೂಡ ಅವಕ್ಕಿಲ್ಲ. 
"ಅವರ (ನೀತಿಗಳು ಮತ್ತು ನಿಯಮಗಳು) ಎಲ್ಲರ ಏಕರೂಪತೆ, ಶಿಸ್ತು ಮತ್ತು ಕ್ರಮವನ್ನು ಬಯಸುತ್ತವೆ, ಇದು ವಾಯುಪಡೆಗೆ ಅವಶ್ಯಕ ಕೂಡ ಮತ್ತು ಇತರ ಸೇನಾ ಪಡೆಗಳಿಗೂ" ಎಂದು ಪೀಠ ಆದೇಶ ನೀಡಿದೆ. 
ತಾವು ಮುಸ್ಲಿಂ ಸಮುದಾಯಕ್ಕೆ ಸೇರಿದವರಾದ್ದರಿಂದ, ಧಾರ್ಮಿಕ ನೆಲೆಯ ಮೇಲೆ ತಮಗೆ ಗಡ್ಡ ಬೆಳೆಸಲು ಜುಬೈರ್ ಅವಕಾಶ ಕೋರಿದ್ದನ್ನು ಭಾರತೀಯ ವಾಯು ಪಡೆ(ಐ ಎ ಎಫ್) ತಿರಸ್ಕರಿಸಿತ್ತು. 
ಜುಬೈರ್ ಅವರು ಈ ಮನವಿಯನ್ನು ಜನವರಿ ೧೦, ೨೦೦೫ ರಂದು ಸಲ್ಲಸಿದ್ದರು ಮತ್ತು ಅದರ ಮುಂದಿನ ತಿಂಗಳೇ ಹಿರಿಯ ಅಧಿಕಾರಿ ಇದನ್ನು ತಿರಸ್ಕರಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT