ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ 
ಪ್ರಧಾನ ಸುದ್ದಿ

ಅಗಸ್ಟಾ ವೆಸ್ಟ್ ಲ್ಯಾಂಡ್ ಒಪ್ಪಂದ ಕುರಿತು ಚರ್ಚಿಸಲು ನಾವು ಸಿದ್ಧ: ಖರ್ಗೆ

ನಿಯಮಗಳನ್ನು ಪಾಲಿಸಿದರೆ ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಚಾಪರ್ ಒಪ್ಪಂದ ಪ್ರಕರಣವನ್ನು ಚರ್ಚಿಸಲು ನಮ್ಮ ಪಕ್ಷ ಸಿದ್ಧವಿದೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ

ನವದೆಹಲಿ: ನಿಯಮಗಳನ್ನು ಪಾಲಿಸಿದರೆ ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಚಾಪರ್ ಒಪ್ಪಂದ ಪ್ರಕರಣವನ್ನು ಚರ್ಚಿಸಲು ನಮ್ಮ ಪಕ್ಷ ಸಿದ್ಧವಿದೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಗುರುವಾರ ಹೇಳಿದ್ದಾರೆ. 
"ಕಳೆದ ಅಧಿವೇಶನದಲ್ಲಿಯೇ ಅಗಸ್ಟಾ ವೆಸ್ಟ್ ಲ್ಯಾಂಡ್ ಸುಧೀರ್ಘ ಚರ್ಚೆಗೆ ಒಳಪಟ್ಟಿದೆ. ಆದರೆ ಅವರು ಮತ್ತೆ ಚರ್ಚಿಸಲು ಇಚ್ಛಿಸಿದರೆ ನಾವು ಸಿದ್ಧರಿದ್ದೇವೆ. ಅವರು ಕೆಲವು ನಿಯಮಗಳನ್ನು ಪಾಲಿಸಿ, ಕಾರ್ಯಪಟ್ಟಿಯಲ್ಲಿ ಒಳಗೊಳ್ಳಬೇಕು" ಎಂದು ಖರ್ಗೆ ಹೇಳಿದ್ದಾರೆ. 
ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಖರ್ಗೆ ಮಾತನಾಡುತ್ತಿದ್ದರು. 
ನೋಟು ಹಿಂಪಡೆತ ಅವ್ಯವಸ್ಥೆಯ್ಯಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೂಡ ಖರ್ಗೆ ಆರೋಪಿಸಿದ್ದಾರೆ. 
"ಅವರು ಅಗಸ್ಟಾ ವೆಸ್ಟ್ ಲ್ಯಾಂಡ್ ಪ್ರಕರಣ ಎತ್ತುತ್ತಿದ್ದಾರೆ, ಅವರು ಪೋಸ್ಟರ್ ಗಳನ್ನೂ ಪ್ರದರ್ಶಿಸುತ್ತಿದ್ದಾರೆ. ಗಮನ ಬೇರೆಡೆ ಸೆಳೆಯುವುದು ಅವರ ಇಚ್ಛೆ" ಎಂದಿರುವ ಖರ್ಗೆ "ಅವರು ನಾವು ಹೇಳುವುದನ್ನು ಕೇಳುವುದಕ್ಕೆ ತಯಾರಿಲ್ಲ. ಈ ವಿಷಯವಾಗಿ ಸಭಾಪತಿಯವರ ಜೊತೆಗೆ ಕೂಡ ನಾವು ಮಾತನಾಡಿದ್ದೇವೆ" ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT