ಸುಬ್ರಮಣಿಯನ್ ಸ್ವಾಮಿ 
ಪ್ರಧಾನ ಸುದ್ದಿ

ಡಿಮಾನಿಟೈಸೇಶನ್ ಬಗ್ಗೆ ಅರುಣ್ ಜೈಟ್ಲಿ ಸರಿಯಾಗಿ ಪ್ಲಾನ್ ಮಾಡಿಲ್ಲ: ಸುಬ್ರಮಣಿಯನ್ ಸ್ವಾಮಿ

ನೋಟು ನಿಷೇಧದ ನಂತರ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ಹಣಕಾಸು ಸಚಿವ ಅರುಣ್ ಜೇಟ್ಲಿ ಸರಿಯಾಗಿ ಪ್ಲಾನ್ ಮಾಡಿಲ್ಲ...

ಕೊಯಂಬತ್ತೂರ್: ನೋಟು ನಿಷೇಧದ ನಂತರ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ಹಣಕಾಸು ಸಚಿವ ಅರುಣ್ ಜೇಟ್ಲಿ ಸರಿಯಾಗಿ ಪ್ಲಾನ್ ಮಾಡಿಲ್ಲ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್  ಸ್ವಾಮಿ ಆರೋಪಿಸಿದ್ದಾರೆ.

ಕೊಯಂಬತ್ತೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, ನೋಟು ನಿಷೇಧ ಘೋಷಿಸುವ ಮುನ್ನ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು ನಂತರ ವಷ್ಟೇ ಹಣಕಾಸು ಇಲಾಖೆ ಅನಾಣ್ಯೀಕರಣ ಘೋಷಿಸಬೇಕಿತ್ತು. ಆದರೇ ಹಣಕಾಸು ಇಲಾಖೆ ಅಗತ್ಯವಾದ ಪೂರ್ವ ತಯಾರಿ ಮಾಡಿಕೊಳ್ಳದ ಕಾರಣ ಜಮ ಸಾಮಾನ್ಯರು ಸಮಸ್ಯೆ ಎದುರಿಸುವಂತಾಗಿದೆ ಎಂದು ದೂರಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಎಟಿಎಂ ಗಳನ್ನು ಸ್ಥಾಪಿಸಿ, ನಿಷೇಧಿಸಿದ ನೋಟುಗಳ ಅಳತೆಯಲ್ಲೇ ಹೊಸ ನೋಟುಗಳನ್ನು ಮುದ್ರಿಸಿ, ಇದರಿಂದ ಎಟಿಎಂ ಬಳಕೆಗೆ ಉಪಯೋಗವಾಗುತ್ತದೆ ಎಂದು ನಾವು ಶಿಪಾರಸು ಮಾಡಿದ್ದೆವು. ಜೊತೆಗೆ ಆದಾಯ ತೆರಿಗೆಯನ್ನು ಇಳಿಕೆ ಮಾಡುವಂತೆ ನಾವು ಸಲಹೆ ನೀಡಿದ್ದೆವು, ಆದರೆ ಸರ್ಕಾರ ನಾವು ನೀಡಿದ್ದ ಯಾವುದೇ ಸಲಹೆಯನ್ನು ಅನುಷ್ಠಾನಕ್ಕೆ ತರಲಿಲ್ಲ ಎಂದು ಸ್ವಾಮಿ ಆಪಾದಿಸಿದ್ದಾರೆ.

ತಲೆದೋರಿರುವ ನಗದು ಬಿಕ್ಕಟ್ಟು ಹಾಗೂ ಹೊಸ ನೋಟುಗಳ ಹಂಚಿಕೆಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಅರುಣ್ ಜೇಟ್ಲಿ ಉತ್ತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ನೋಟು ನಿಷೇಧವನ್ನು ಅಧಿಕೃತವಾಗಿ ಘೋಷಿಸುವ ಮುನ್ನ ಕೆಲವರಿಗೆ ವಿಷಯ ಸೋರಿಕೆಯಾಗಿತ್ತು. ಈ ಸಂಬಂಧ ನಾವು ಯಾವುದೇ ಕೇಸು ದಾಖಲಿಸುತ್ತಿಲ್ಲ, ಆದರೆ ಸರ್ಕಾರ ಇದರ ವಿರುದ್ಧ ಕೇಸು ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT