ಯು.ಟಿ.ಖಾದರ್ 
ಪ್ರಧಾನ ಸುದ್ದಿ

ಬಿಪಿಎಲ್ ಕಾರ್ಡ್ ದಾರರಿಗೆ ನಗದು ಕೂಪನ್, ಇನ್ಮುಂದೆ ಕಿರಾಣಿ ಅಂಗಡಿಯಲ್ಲೂ ಸಿಗುತ್ತೆ ಪಡಿತರ

ರಾಜ್ಯ ಸರ್ಕಾರ ಪಡಿತರ ವಿತರಣೆಯನ್ನು ಜನಸ್ನೇಹಿಯಾಗಿ ರೂಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಇನ್ನುಮುಂದೆ ನಿಗದಿತ ಕಿರಾಣಿ...

ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ವಿತರಣೆಯನ್ನು ಜನಸ್ನೇಹಿಯಾಗಿ ರೂಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಇನ್ನುಮುಂದೆ ನಿಗದಿತ ಕಿರಾಣಿ ಅಂಗಡಿಗಳಲ್ಲೂ ಪಡಿತರ ಪಡೆದುಕೊಳ್ಳಬಹುದಾಗಿದೆ ಎಂದು ಆಹಾರ ಖಾತೆ ಸಚಿವ ಯು.ಟಿ ಖಾದರ್ ಬುಧವಾರ ಹೇಳಿದ್ದಾರೆ.
ಇಂಗು ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಕೂಪನ್ ಬದಲಿಗೆ ಇನ್ನು ಮುಂದೆ ನಗದು ಕೂಪನ್ ವಿತರಿಸಲಾಗುವುದು. ಈ ಕೂಪನ್ ಗಳನ್ನು ಕೊಟ್ಟು ನಿಗದಿತ ಕಿರಾಣಿ ಅಂಗಡಿಗಳಲ್ಲಿ ತಮಗೆ ಬೇಕಾದ ಆಹಾರ ಧಾನ್ಯ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಈ ಯೋಜನೆಯನ್ನು ಪ್ರಾಯೋಗಿಕವಾಗಿ ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಜಾರಿ ತರಲಾಗುತ್ತಿದ್ದು, ಬೆಂಗಳೂರು ಒನ್ ಹಾಗೂ ಪಂಚಾಯಿತಿ ಕಚೇರಿಗಳಲ್ಲಿ ನಗದು ಕೂಪನ್ ವಿತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 3000 ಬಿ.ಪಿ.ಎಲ್. ಕಾರ್ಡ್ ದಾರರಿಗೆ ಕೂಪನ್ ವಿತರಿಸಲಿದ್ದು, ಜನವರಿ ಇಲ್ಲವೇ ಫೆಬ್ರವರಿಯಲ್ಲಿ ಪೈಲಟ್ ಯೋಜನೆ ಜಾರಿಗೆ ಬರಲಿದೆ ಎಂದಿದ್ದಾರೆ.
ನಗದು ಕೂಪನ್ ಬಿ.ಪಿ.ಎಲ್. ಕಾರ್ಡ್ ದಾರರಿಗೆ ಮಾತ್ರ. ಎ.ಪಿ.ಎಲ್. ಕಾರ್ಡ್ ದಾರರಿಗೆ ಇದು ಅನ್ವಯಿಸುವುದಿಲ್ಲ ಎಂದ ಅವರು, ನೋಂದಾಯಿತ ಕಿರಾಣಿ ಅಂಗಡಿಗಳಲ್ಲಿ ಆಹಾರ ಧಾನ್ಯ ಪಡೆಯುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಿ.ಪಿ.ಎಲ್. ಕಾರ್ಡ್ ಪಡೆಯಲು ಆಧಾರ್ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಕೆ ನಂತರ ಗ್ರಾಮ ಪಂಚಾಯಿತಿ ಮೂಲಕ ಪರಿಶೀಲನೆ ನಡೆಸಲಾಗುವುದು. ಎ.ಪಿ.ಎಲ್. ಕಾರ್ಡ್ ದಾರರಿಗೆ ಅರ್ಜಿ ಸಲ್ಲಿಸಿ ಪರಿಶೀಲನೆ ಬಳಿಕ ಕಾರ್ಡ್ ಪ್ರಿಂಟ್ ತೆಗೆದುಕೊಳ್ಳುವ ಸೌಲಭ್ಯ ಕಲ್ಪಿಸಲಾಗಿದೆ. 15 ದಿನಗಳಲ್ಲಿ ಸ್ಪೀಡ್ ಪೋಸ್ಟ್ ಮೂಲಕ ಅಧಿಕೃತವಾಗಿ ಕಾರ್ಡ್ ಮನೆ ಬಾಗಿಲಿಗೆ ಬರುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಅಲ್ಲದೆ 161ಕ್ಕೆ ಕರೆ ಮಾಡಿ ನಗದು ಕೂಪನ್ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!