ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್
ನವದೆಹಲಿ: ೧೯೮೪ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರಿಗೆ ಬುಧವಾರ ಇಲ್ಲಿನ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ನವೆಂಬರ್ ೧, ೧೯೮೪ ರಲ್ಲಿ ಝನಕಪುರಿ ಪ್ರದೇಶದಲ್ಲಿ ಗಲಭೆಗೆ ಪ್ರಚೋದಿಸಿ ಇಬ್ಬರು ಸಿಖ್ಖರು - ಸೋಹನ್ ಸಿಂಗ್ ಮತ್ತು ಅವರ ಪುತ್ರ ಅವತಾರ್ ಸಿಂಗ್ ಅವರನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಸಜ್ಜನ್ ಕುಮಾರ್ ಅವರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿಕಾಸ್ ಧುಲ್ ನಿರೀಕ್ಷಣಾ ಜಾಮೀನು ನೀಡಿದ್ದಾರೆ.
ಇತ್ತೀಚೆಗಷ್ಟೇ ವಿಶೇಷ ತನಿಖಾ ದಳ ಈ ಪ್ರಕರಣದ ತನಿಖೆ ನಡೆಸಿತ್ತು.
ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಇಬ್ಬರು ಸಿಖ್ ಅಂಗರಕ್ಷಕರು ಕೊಂದ ನಂತರ ನಡೆದಿದ್ದ ಈ ಗಲಭೆಯಲ್ಲಿ, ಬಹುತೇಕ ದೆಹಲಿಯಲ್ಲಿಯೇ ೩೦೦೦ ಸಿಖ್ಖರನ್ನು ಹತ್ಯೆಗೈಯ್ಯಲಾಗಿತ್ತು.
ಸಜ್ಜನ್ ಕುಮಾರ್ ಒಳಗೊಂಡಂತೆ ಹಿರಿಯ ಕಾಂಗ್ರೆಸ್ ರಾಜಕಾರಿಣಿಗಳು, ಗಲಭೆ ಪ್ರಚೋದನೆ, ಗುಂಪುಗಳನ್ನು ಮುನ್ನಡೆಸಿ ಹಿಂಸೆಗೆ ಎಡೆ ಮಾಡಿಕೊಟ್ಟು ಸಿಖ್ಖರನ್ನು ಹತ್ಯೆ ಮಾಡಿದ ಆರೋಪಗಳನ್ನು ಎದುರಿಸುತ್ತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos