ಶೇಖರ್ ರೆಡ್ಡಿ 
ಪ್ರಧಾನ ಸುದ್ದಿ

ತಮಿಳುನಾಡಿನಲ್ಲಿ ಶೇಖರ್‌ ರೆಡ್ಡಿ ಸಹಾಯಕನ ಮನೆ ಐಟಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ತಿರುಮಲ ತಿರುಪತಿ ದೇವಸ್ಥಾನ ಸಮಿತಿ ಟ್ರಸ್ಟಿಯಲ್ಲೊಬ್ಬರಾದ...

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ತಿರುಮಲ ತಿರುಪತಿ ದೇವಸ್ಥಾನ ಸಮಿತಿ ಟ್ರಸ್ಟಿಯಲ್ಲೊಬ್ಬರಾದ ಚೆನ್ನೈ ಮೂಲದ ಉದ್ಯಮಿ ಜೆ. ಶೇಖರ್‌ ರೆಡ್ಡಿ ಸಹಾಯಕ ಹಾಗೂ ಖ್ವಾರಿ ಗುತ್ತಿಗೆದಾರ ರತ್ನಂ ಅವರ ಮನೆ ಮೇಲೆ ಶನಿವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರತ್ನಂ ಸಹ ಅಕ್ರಮ ಹಣ ವಿನಿಯಮ ಮಾಡಿದ ಆರೋಪದ ಮೇಲೆ ಎರಡು ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದು, ಇಂದು ಬೆಳಗ್ಗೆ ಪೆರಂಬಲೂರ್ ನ ಆದಾಯ ತೆರಿಗೆ ಅಧಿಕಾರಿಗಳು ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ.
ಕಳೆದ ವಾರ ರೆಡ್ಡಿ ಹಾಗೂ ಇತರೆ ಇಬ್ಬರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಅಧಿಕಾರಿಗಳು 170 ಕೋಟಿ ರು ನಗದು ಹಾಗೂ 130 ಕೆಜಿ ಚಿನ್ನ ಮತ್ತು ಆಭರಣವನ್ನು ಜಪ್ತಿ ಮಾಡಿದ್ದರು. ಇದೇ ಪ್ರಕರಣ ಸಂಬಂಧ ಸಿಬಿಐ ಡಿಸೆಂಬರ್ 22ರಂದು ರತ್ನಂ ಹಾಗೂ ಮತ್ತೊಂದು ಖ್ವಾರಿ ಗುತ್ತಿಗೆದಾರ ರಾಮಚಂದ್ರನ್ ಅವರನ್ನು ಸಹ ಬಂಧಿಸಿದೆ.
ಡಿಸೆಂಬರ್ 21ರಂದು ಶೇಖರ್ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಹಾಗೂ ಪ್ರೇಮ್ ಅವರನ್ನು ಬಂಧಿಸಿದ್ದು, ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT