ಹಮೀದ್ ಅನ್ಸಾರಿ 
ಪ್ರಧಾನ ಸುದ್ದಿ

ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಆತಂಕ

ಬಡತನ, ಅಪೌಷ್ಠಿಕತೆ, ಜಾತೀಯತೆ ಹಾಗೂ ದಲಿತರ ಮೇಲಿನ ದೌರ್ಜನ್ಯದಿಂದಾಗಿ ದೇಶ ನರಳುತ್ತಿದೆ ಎಂದು ಉಪರಾಷ್ಟ್ರಪತಿ...

ಬೆಂಗಳೂರು: ಬಡತನ, ಅಪೌಷ್ಠಿಕತೆ, ಜಾತೀಯತೆ ಹಾಗೂ ದಲಿತರ ಮೇಲಿನ ದೌರ್ಜನ್ಯದಿಂದಾಗಿ ದೇಶ ನರಳುತ್ತಿದೆ ಎಂದು ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಭಾರತೀಯ ವಕೀಲರ ಸಂಘ ಹಮ್ಮಿಕೊಂಡಿದ ಸಂವಿಧಾನ, ಸುಪ್ರೀಂ ಕೋರ್ಟ್ ಮತ್ತು ಸಾಮಾಜಿಕ ನ್ಯಾಯ ಕುರಿತ 9ನೇ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅನ್ಸಾರಿ, ದೇಶದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ದಲಿತರ ಮೇಲೆ ದೌರ್ಜನ್ಯ ಹಾಗೂ ದಬ್ಬಾಳಿಕೆ ನಡೆಯುತ್ತಿದೆ ಎಂದರು.
ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು. ಹಾಗ ಮಾತ್ರ ಸಮಾನತೆ ಮತ್ತು ದೇಶದ ಅಭಿವೃದ್ಧಿ ಹೊಂದಲು ಸಾಧ್ಯ. ಆದರೆ ಶೇ.45ರಷ್ಟು ಸಂಪತ್ತು ಕೇವಲ ಶೇ.1ರಷ್ಟು ಇರುವ ಕಾರ್ಪೋರೇಟ್ ಜಗತ್ತಿನ ಕೈಯಲ್ಲಿದೆ. ಹೀಗಾಗಿ ನಿರೀಕ್ಷಿತ ಪ್ರಮಾಣದಲ್ಲಿ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿಲ್ಲ ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು.
ಸಮಾಜದ ಪ್ರತಿಯೊಬ್ಬರ ಅಭಿವೃದ್ಧಿ ಮತ್ತು ಶೋಷಿತರ ಬೆಳವಣಿಗೆಗೆ ಸಮಾನತೆ ಪ್ರಬಲ ಅಸ್ತ್ರ. ಹೀಗಾಗಿ ಅದು ಸಮರ್ಪಕವಾಗಿ ಜಾರಿಯಾಗಬೇಕು. ಆದರೆ ಇತ್ತೀಚಿಗೆ ಅದರ ಪಾಲನೆಯಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಇದೇ ವೇಳೆ ನ್ಯಾಯಾಂಗವೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಪ್ರಬಲವಾದ ಶಕ್ತಿಯಾಗಿದ್ದು, ಸುಪ್ರೀಂ ಕೋರ್ಟ್ ಕಾಲಕಾಲಕ್ಕೆ ನ್ಯಾಯದ ಪರಿಕಲ್ಪನೆಗೆ ಪೂರಕವಾಗಿ ಸ್ಪಂದಿಸಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT