ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ನೋಟು ನಿಷೇಧದ ನೆಪ ಹೇಳದೆ ತೆರಿಗೆ ಸಂಗ್ರಹಿಸಿ: ಅಧಿಕಾರಿಗಳಿಗೆ ಸಿಎಂ ತಾಕೀತು

ನೋಟ್‌ ನಿಷೇಧದ ನೆಪ ಹೇಳಿ ಜನ ತೆರಿಗೆ ಕಟ್ಟುವುದರಿಂದ ನುಣುಚಿಕೊಳ್ಳಲು ಅವಕಾಶ ನೀಡಬೇಡಿ. ನಿರೀಕ್ಷಿತ ಪ್ರಮಾಣದಲ್ಲಿ...

ಬೆಂಗಳೂರು: ನೋಟ್‌ ನಿಷೇಧದ ನೆಪ ಹೇಳಿ ಜನ ತೆರಿಗೆ ಕಟ್ಟುವುದರಿಂದ ನುಣುಚಿಕೊಳ್ಳಲು ಅವಕಾಶ ನೀಡಬೇಡಿ. ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಸಂಗ್ರಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಗರಿಷ್ಠ ಮೌಲ್ಯದ ನೋಟ್ ನಿಷೇಧದ ನಂತರ ತೆರಿಗೆ ಸಂಗ್ರಹ ಕುಂಠಿತವಾದ ಹಿನ್ನಲೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಣಕಾಸು, ವಾಣಿಜ್ಯ, ಅಬಕಾರಿ, ಸಾರಿಗೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ನೋಟು ನಿಷೇಧದ ನೆಪ ಹೇಳಿ ತೆರಿಗೆಯಿಂದ ವಂಚಿತವಾಗಲು ಅವಕಾಶ ನೀಡಬೇಡಿ . ಈಗಾಗಲೇ ಎರಡು ತಿಂಗಳು ಕಳೆದುಹೋಗಿದ್ದು, ಮುಂದಿನ ವರ್ಷದಿಂದ ಹೆಚ್ಚಿನ ತೆರಿಗೆ ಬೊಕ್ಕಸಕ್ಕೆ ತರಬೇಕು ಎಂದು ಸೂಚಿಸಿದರು.
ಕಳೆದ ಎರಡು ತಿಂಗಳಿನಿಂದ ತೆರಿಗೆ ಸಂಗ್ರಹ ಗಣನೀಯವಾಗಿ ಕುಸಿತ ಕಂಡಿದ್ದು, 2016-17ನೇ ಸಾಲಿನಲ್ಲಿ 83 ಸಾವಿರ ಕೋಟಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಿದ್ದು, ತೆರಿಗೆಯ ಎಲ್ಲಾ ಮೂಲಗಳಿಂದ ಪ್ರತಿ ತಿಂಗಳಿಗೆ ಸರಾಸರಿ 6500 ಕೋಟಿ ರು. ತೆರಿಗೆ ಸಂಗ್ರಹ ಆಗಬೇಕಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಅಂಕಿ ಅಂಶಗಳ ಸಮೇತ ವಿವರಿಸಿದರು.
ಕಳೆದ ಎರಡು ತಿಂಗಳುಗಳಲ್ಲಿ ತೆರಿಗೆ ಸಂಗ್ರಹದಲ್ಲಿ ಗಣನೀಯ ಕುಸಿತವಾಗಿದೆ. ಹಣಕಾಸು, ವಾಣಿಜ್ಯ, ಅಬಕಾರಿ, ಸಾರಿಗೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗಳ ತೆರಿಗೆ ಸಂಗ್ರಹದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT