ಮುದ್ರಗಡ ಪದ್ಮನಾಭಂ ಹಾಗೂ ಕುಟುಂಬ ಸದಸ್ಯರು 
ಪ್ರಧಾನ ಸುದ್ದಿ

ಮೀಸಲಾತಿಗೆ ಆಗ್ರಹಿಸಿ ಕಾಪು ನಾಯಕ ಮುದ್ರಗಡ ಪದ್ಮನಾಭಂರಿಂದ ಉಪವಾಸ ಸತ್ಯಾಗ್ರಹ

ಕಾಪು ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಮೀಸಲಾತಿ ದೊರಕಿಸಬೇಕೆಂದು ಆಗ್ರಹಿಸಿ ಕಾಪು ನಾಯಕ ಮುದ್ರಗಡ...

ಕಿರಲಂಪುಡಿ, ಆಂಧ್ರಪ್ರದೇಶ: ಕಾಪು ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಮೀಸಲಾತಿ ದೊರಕಿಸಬೇಕೆಂದು ಆಗ್ರಹಿಸಿ ಕಾಪು ನಾಯಕ ಮುದ್ರಗಡ ಪದ್ಮನಾಭಂ ಅವರು ಶುಕ್ರವಾರದಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಆಂಧ್ರ ಪ್ರದೇಶ ಸರ್ಕಾರ ಸಮುದಾಯದ ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಪದ್ಮನಾಭಂ ಅವರು, ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ 8.30ರಿಂದ ಕುಟುಂಬ ಸದಸ್ಯರೊಂದಿಗೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
60 ವರ್ಷದ ಪದ್ಮನಾಭಂ ಅವರು, ಸರ್ಕಾರ ಯಾವುದೇ ವಿಳಂಬ ಮಾಡದೇ ಈ ಕೂಡಲೇ ಕಾಪು ಸಮುದಾಯಕ್ಕೆ ಒಬಿಸಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 
ನಿನ್ನೆ ರಾತ್ರಿಯೇ ರಾಜ್ಯ ಸರ್ಕಾರದ ಪ್ರತಿನಿಧಿ, ಶಾಸಕರಾದ ಬೊಂಡ ಉಮಾಮೇಶ್ವರ ರಾವ್, ಜ್ಯೋತುಲಾ ನೆಹರು ಮತ್ತು ಬೊಡ್ಡ ಭಾಸ್ಕರ್ ರಾಮರಾವ್ ಅವರು ಉಪವಾಸ ಸತ್ಯಾಗ್ರಹ ನಡೆಸದಂತೆ ಪದ್ಮನಾಭಂ ಅವರನ್ನು ಮನವೊಲಿಸಲು ಯತ್ನ ನಡೆಸಿ ವಿಫಲವಾಗಿದ್ದಾರೆ.
ಮೀಸಲಾತಿ ಆಗ್ರಹಿಸಿ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಭಾರೀ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದ ಕಾಪು ಸಮುದಾಯದ ನಾಯಕರು, ಕಾಪು ಜನಾಂಗವನ್ನು ಹಿಂದೂಳಿದ ವರ್ಗಗಳ ಪಟ್ಟಿಗೆ ಸೇರಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದರು. ಆದರೆ ಇದುವರೆಗೂ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT