ಉಗ್ರ ಡೇವಿಡ್ ಹೆಡ್ಲಿ 
ಪ್ರಧಾನ ಸುದ್ದಿ

26/11 ಮುಂಬೈ ದಾಳಿ ಪ್ರಕರಣ: ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಹೆಡ್ಲಿ ಸಾಕ್ಷ್ಯ

26/11 ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸೆಷನ್ಸ್ ಕೋರ್ಟ್ ಸೋಮವಾರ ವಿಡಿಯೋ ಕಾನ್ಫರೆನ್ಸ್...

ಮುಂಬೈ: 26/11 ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸೆಷನ್ಸ್ ಕೋರ್ಟ್ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉಗ್ರ ಡೇವಿಡ್ ಹೆಡ್ಲಿಯ ವಿಚಾರಣೆ ನಡೆಸಲಿದೆ.
ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಡೇವಿಡ್ ಹೆಡ್ಲಿ ಮುಂಬೈ ದಾಳಿಯ ಪ್ರಮುಖ ಆರೋಪಿ. ಅಮೆರಿಕದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಡೇವಿಡ್ ಹೆಡ್ಲಿ ಮುಂಬೈ ನ್ಯಾಯಾಲಯದ ವಿಚಾರಣೆ ಎದುರಿಸಲಿದ್ದಾರೆ. 
ಅಮೆರಿಕಾದ ರಹಸ್ಯ ಸ್ಥಳದಿಂದ ಸುಮಾರು 5 ಗಂಟೆಗಳ ಕಾಲ ನಡೆಯೋ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾಕ್ಷ್ಯ ನೀಡಲಿದ್ದಾರೆ. ಈ ವೇಳೆ ಮುಂಬೈ ಕೋರ್ಟ್ ನಲ್ಲಿ ಎಸ್ ಪಿಪಿ ಉಜ್ವಲ್ ನಿಕ್ಕಮ್, ಉಗ್ರ ಹೆಡ್ಲಿ ಪರ ವಕೀಲ ಮಹೇಶ್ ಜೇಠ್ಮಲಾನಿ, ಅಮೆರಿಕ ರಾಯಭಾರ ಕಚೇರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ಈ ಹಿಂದೆ ಎನ್ ಐಎ ವಿಚಾರಣೆ ನಡೆಸಿದ ವೇಳೆ, ದಾಳಿಯಲ್ಲಿ ಐಎಸ್ ಐ ಕೈವಾಡವಿದೆ ಎಂದು ಹೆಡ್ಲಿ ಖಚಿತ ಪಡಿಸಿದ್ದನು. ದಾಳಿಗೂ ಮುನ್ನ ಈತ ಮುಂಬೈಗೆ ಭೇಟಿ ನೀಡಿ ದಾಳಿಯ ರೂಪುರೇಷೆ ಸಿದ್ಧಪಡಿಸಿದ್ದ ಎಂಬ ಮಾಹಿತಿ ನೀಡಿದ್ದನು. 
26 /11 ಮುಂಬೈ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪಾಕಿಸ್ತಾನಿ-ಅಮೆರಿಕನ್ ಲಷ್ಕರ್ ಉಗ್ರ ಡೇವಿಡ್ ಕೋಲ್ಮನ್ ಹೆಡ್ಲಿ, ಯುಎಸ್ ನಲ್ಲಿ 35 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಮುಂಬೈ ಕೋರ್ಟ್ ನಲ್ಲಿ ನನ್ನ ವಿರುದ್ಧ ಸಲ್ಲಿಸಲಾಗಿರುವ ಆರೋಪಪಟ್ಟಿಯನ್ನು ಪಡೆದಿದ್ದೇನೆ, ಯುಎಸ್ ನಲ್ಲಿ ಯಾವ ಆರೋಪ ಹೊರಿಸಲಾಗಿದೆಯೋ ಮುಂಬೈ ನ್ಯಾಯಾಲಯದಲ್ಲೂ ಅದೇ ಆರೋಪವನ್ನು ಹೊರಿಸಲಾಗಿದೆ. ಈ ಆರೋಪಗಳಲ್ಲಿ ನನ್ನನ್ನು ದೋಷಿಯೆಂದು ಯುಎಸ್ ನ್ಯಾಯಾಲಯ ತೀರ್ಪು ನೀಡಿದ್ದು ನಾನು ಅಪರಾಧದಲ್ಲಿ ಭಾಗಿಯಾಗಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದೆ ಎಂದು ಹೇಡ್ಲಿ ಹೇಳಿದ್ದನು. 
ಕ್ಷಮಾದಾನ ನೀಡುವುದಾದರೆ ಅಪ್ರೂವರ್ ಆಗಿ ತಪ್ಪೊಪ್ಪಿಕೊಳ್ಳಲು ಸಿದ್ಧ ಎಂದು ಡೇವಿಡ್ ಹೆಡ್ಲಿ ಮುಂಬೈ ನ್ಯಾಯಾಲಯಕ್ಕೆ ಮನವಿ ಮಾಡಿದ್ದ. ಈ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT