ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮತ್ತಷ್ಟು ಜೀವಬಲಿ ತಡೆಗೆ ಸಿಯಾಚಿನ್‌ ಇತ್ಯರ್ಥಕ್ಕೆ ಸಮಯ ಬಂದಿದೆ: ಪಾಕಿಸ್ತಾನ

ವೀರಯೋಧ ಲ್ಯಾನ್ಸ್‌ನಾಯಕ್‌ ಹನುಮಂತಪ್ಪ ಕೊಪ್ಪದ್ ಅವರು ಮೂರು ದಿನಗಳಿಂದ ದೆಹಲಿ ಆರ್ ಆರ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಹುತಾತ್ಮರಾದ...

ನವದೆಹಲಿ: ವೀರಯೋಧ ಲ್ಯಾನ್ಸ್‌ನಾಯಕ್‌ ಹನುಮಂತಪ್ಪ ಕೊಪ್ಪದ್ ಅವರು ಮೂರು ದಿನಗಳಿಂದ ದೆಹಲಿ ಆರ್ ಆರ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಹುತಾತ್ಮರಾದ ದಿನವೇ ಭಾರತ ಮತ್ತು ಪಾಕಿಸ್ಥಾನ ಸಿಯಾಚಿನ್‌ ವಿವಾದವನ್ನು ತುರ್ತಾಗಿ ಬಗೆಹರಿಸಬೇಕಾದ ಕಾಲ ಈಗ ಒದಗಿ ಬಂದಿದೆ ಎಂದು ಪಾಕ್ ಹೇಳಿದೆ.
ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿಯಾದ ಸಿಯಾಚಿನ್​ನಲ್ಲಿ ಪ್ರಾಕೃತಿಕ ವಿಕೋಪಗಳಿಂದ ಇನ್ನಷ್ಟು ಜೀವಗಳು ಬಲಿಯಾಗುವುದನ್ನು ತಪ್ಪಿಸಲು ಭಾರತ - ಪಾಕಿಸ್ಥಾನ ತುರ್ತಾಗಿ ಸಿಯಾಚಿನ್‌ ವಿವಾದವನ್ನು ಬಗೆಹರಿಸಿಕೊಳ್ಳುವುದು ಅಗತ್ಯವೆಂದು ನಾವು ತಿಳಿಯುತ್ತೇವೆ ಎಂದು ಪಾಕ್‌ ಹೈಕಮಿಷನರ್‌ ಅಬ್ದುಲ್‌ ಬಾಸಿತ್‌ ಹೇಳಿದ್ದಾರೆ.
ಸಿಯಾಚಿನ್​ನಲ್ಲಿ ಸಂಭವಿಸಿದ ಹಿಮಕುಸಿತದಿಂದಾಗಿ 10 ಸೈನಿಕರು ಹುತಾತ್ಮರಾದ ಹಿನ್ನೆಲೆಯಲ್ಲಿ ಸಿಯಾಚಿನ್​ನಿಂದ ಸೇನೆ ಹಿಂಪಡೆಯುವ ಸಂಬಂಧ ಮಾತುಕತೆ ಆರಂಭಿಸಲು ಪಾಕಿಸ್ತಾನ ಆಸಕ್ತಿ ತೋರಿದೆ.
ಪ್ರಸ್ತುತ ಸಿಯಾಚಿನ್​ನಿಂದ ಸೇನೆ ಹಿಂಪಡೆಯುವ ಕುರಿತು ಉಭಯ ದೇಶಗಳು ಚರ್ಚೆ ನಡೆಸುವ ಸಮಯ ಬಂದಿದೆ. ಶಾಂತಿಯುತ ಮಾತುಕತೆಗಳ ಮೂಲಕ ಪರಸ್ಪರ ಒಪ್ಪಿಗೆಯ ಮೇರೆಗೆ ಸೇನೆ ಹಿಂಪಡೆಯುವ ಮೂಲಕ ಮತ್ತಷ್ಟು ಸೈನಿಕರು ಬಲಿಯಾಗದಂತೆ ತಡೆಯಬಹುದು ಎಂದು ಬಸಿತ್ ತಿಳಿಸಿದ್ದಾರೆ.
ಕಳೆದ ಮೂರು ದಶಕಗಳಿಂದಲೂ ವಿವಾದಾತ್ಮಕವಾಗಿರುವ ಮತ್ತು ಈ ಅತ್ಯುನ್ನತ ಸಮರ ಭೂಮಿಯನ್ನು ತನ್ನ ನಿಯಂತ್ರಣದಲ್ಲಿ ಉಳಿಸಿಕೊಳ್ಳುವುದಕ್ಕೆ ಬದ್ಧವಾಗಿರುವ ಭಾರತ 1983ರಿಂದ ಈ ತನಕ 33 ಅಧಿಕಾರಿಗಳ ಸಹಿತ 879 ಸೈನಿಕರನ್ನು ಕಳೆದುಕೊಂಡಿರುವುದನ್ನು ಗಮನಿಸಿದರೆ ಸಿಯಾಚಿನ್‌ ಹಿಮ ಪರ್ವತ ಯೋಧರ ಮಟ್ಟಿಗೆ ವಸ್ತುತಃ ರುದ್ರಭೂಮಿಯೇ ಆಗಿದೆ ಎನ್ನದೇ ನಿರ್ವಾಹವಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT