ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಬಿಸಿ ತಟ್ಟದ ಏಕೈಕ ದೇಶ ಭಾರತ: ಪ್ರಧಾನಿ ಮೋದಿ

ಜಗತ್ತನ್ನು ಕಾಡುತ್ತಿರುವ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಬಿಸಿ ತಟ್ಟದ ಏಕೈಕ ದೇಶ ಭಾರತ, ಇದಕ್ಕೆ ಮುಖ್ಯ ಕಾರಣ ಸರ್ಕಾರ ಜಾರಿಗೊಳಿಸುತ್ತಿರುವ ನೀತಿಗಳು ಎಂದು...

ನವದೆಹಲಿ: ಜಗತ್ತನ್ನು ಕಾಡುತ್ತಿರುವ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಬಿಸಿ ತಟ್ಟದ ಏಕೈಕ ದೇಶ ಭಾರತ, ಇದಕ್ಕೆ ಮುಖ್ಯ ಕಾರಣ ಸರ್ಕಾರ ಜಾರಿಗೊಳಿಸುತ್ತಿರುವ ನೀತಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದ್ದಾರೆ.
ಇಂದು ಸಮಾಜ ಸುಧಾರಕ ದಯಾನಂದ ಸರಸ್ವತಿ ಅವರ 140ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ‘ವಿಶ್ವಬ್ಯಾಂಕ್, ಐಎಂಎಫ್ ಸೇರಿದಂತೆ ಪ್ರತಿಯೊಬ್ಬರೂ ಇದನ್ನೇ ಹೇಳುತ್ತಿದ್ದಾರೆ… ಜಗತ್ತು ಆರ್ಥಿಕ ಬಿಕ್ಕಟ್ಟಿನ ಹಾದಿಯಲ್ಲಿ ಸಾಗುತ್ತಿದೆ ಎಂದು, ಆದರೆ ಭಾರತ ಮಾತ್ರವೇ ತ್ವರಿತ ಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿದೆ. ಇದು ವಿಶೇಷ ಪರಿಸ್ಥಿತಿ. ಇಡೀ ಜಗತ್ತು ಜಾರುತ್ತಿರುವಾಗ ಭಾರತ ಬೆಳೆಯುತ್ತಿದೆ’ಎಂದರು,
‘ಕೇಂದ್ರ ಸರ್ಕಾರ ತೆಗೆದುಕೊಂಡ ಕ್ರಮಗಳಿಂದಾಗಿ ಭಾರತ ತ್ವರಿತ ಗತಿಯ ಆರ್ಥಿಕ ಬೆಳವಣಿಗೆ ಸಾಧಿಸಲು ಸಾಧ್ಯವಾಗಿದೆ ಎಂದು ಜಗತ್ತಿನಾದ್ಯಂತ ಜನ ಹೇಳುತ್ತಿದ್ದಾರೆ’ ಎಂದು ಪ್ರಧಾನಿ ತಿಳಿಸಿದರು.
‘ನಮ್ಮ ಸಮಸ್ಯೆಗಳು, ಬಡತನ, ಶೈಕ್ಷಣಿಕ ಅಭಾವ ಇತ್ಯಾದಿಗಳಿಂದ ನಮ್ಮನು ಮುಕ್ತಗೊಳಿಸುವ ಏಕೈಕ ಮಾರ್ಗ ಅಭಿವೃದ್ಧಿ’ ಎಂದು ಮುದ್ರಾ, ಕೌಶಲ್ಯ ಅಭಿವೃದ್ಧಿ ಇತ್ಯಾದಿಯಾಗಿ ತಮ್ಮ ಸರ್ಕಾರದ ಸಾಮಾಜಿಕ-ಆರ್ಥಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸುತ್ತಾ ಮೋದಿ ವಿವರಿಸಿದರು. ಮುದ್ರಾ ಯೋಜನೆಯಡಿ 2 ಕೋಟಿಗೂ ಹೆಚ್ಚು ಜನರಿಗೆ ಅನುಕೂಲವಾಗಿದೆ. ಒಂದು ಲಕ್ಷ ಕೋಟಿ ರೂಪಾಯಗಳಿಗೂ ಹೆಚ್ಚಿನ ಹಣವನ್ನು ಅವರಿಗೆ ವಿತರಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT