ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಆಪ್ ಸರ್ಕಾರದಿಂದ ನೀರಿನ ಬಿಲ್ ಮನ್ನಾ, ದೆಹಲಿ ಜನತೆಗೆ ವರ್ಷದ ಕೊಡುಗೆ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರ ಭಾನುವಾರ ಒಂದು ವರ್ಷ ಪೂರ್ಣಗೊಳಿಸಿದ್ದು, ಈ ಸಂದರ್ಭದಲ್ಲಿ ನೀರಿನ ಬಿಲ್ ಮನ್ನಾ

ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರ ಭಾನುವಾರ ಒಂದು ವರ್ಷ ಪೂರ್ಣಗೊಳಿಸಿದ್ದು, ಈ ಸಂದರ್ಭದಲ್ಲಿ ನೀರಿನ ಬಿಲ್ ಮನ್ನಾ ಮಾಡುವ ಮೂಲಕ ದೆಹಲಿ ಜನತೆಗೆ ವಾರ್ಷಿಕೋತ್ಸವದ ಕೊಡುಗೆ ನೀಡಿದೆ. 
ಆಪ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಂಪುಟದ ಎಲ್ಲಾ ಸಚಿವರ ಜೊತೆಗೆ ಬೃಹತ್ ಜನ ಸಂಪರ್ಕ ಸಭೆ ನಡೆಸಿದರು. ಬಳಿಕ ಈ ವರ್ಷದ ನವೆಂಬರ್ ತಿಂಗಳವರೆಗಿನ ನೀರಿನ್ ಬಿಲ್​ಅನ್ನು ಮನ್ನಾ ಮಾಡಲಾಗುವುದು ಎಂದು ಪ್ರಕಟಿಸಿದರು.
ವಿದ್ಯುತ್ ಮತ್ತು ನೀರಿನ ಬಿಲ್ ವ್ಯವಸ್ಥೆ ಅಯೋಮಯವಾಗಿದೆ. 20,000 ಲೀಟರ್ ನೀರನ್ನು ಉಚಿತವಾಗಿ ನೀಡಿದ ಬಳಿಕವೂ ದೆಹಲಿ ಜಲಮಂಡಳಿಯು ಈ ವರ್ಷ 176 ಕೋಟಿ ರುಪಾಯಿಗಳ ಆದಾಯ ಗಳಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಜನತೆಯ ನೀರಿನ ಬಿಲ್ಲನ್ನು ಆಸ್ತಿ ತೆರಿಗೆ ವರ್ಗೀಕರಣಕ್ಕೆ ಅನುಗುಣವಾಗಿ ಮನ್ನಾ ಮಾಡಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದರು.
ಎ/ಬಿ ವರ್ಗಗಳಿಗೆ ಶೇಕಡಾ 25ರಷ್ಟು ಬಿಲ್ ಮನ್ನಾ ಮಾಡಲಾಗುವುದು. ಸಿ ವರ್ಗಕ್ಕೆ ಶೇಕಡಾ 50, ಡಿ ವರ್ಗಕ್ಕೆ ಶೇಕಡಾ 75 ಮತ್ತು ಇ/ಎಫ್/ಜಿ/ಎಚ್ ವರ್ಗಗಳಿಗೆ ಶೇಕಡಾ 100ರಷ್ಟು ನೀರಿನ ಬಿಲ್ ಮನ್ನಾ ಮಾಡಲಾಗುವುದು ಎಂದು ಅವರು ದೆಹಲಿ ಸಿಎಂ ಹೇಳಿದರು.
2017ರ ಡಿಸೆಂಬರ್ ವೇಳೆಗೆ ಪ್ರತಿಯೊಬ್ಬರಿಗೂ ಕುಡಿಯಲು ಯೋಗ್ಯವಾದ ನೀರು ನಳದಲ್ಲೇ ಬರಲಿದೆ. ಈ ನೀರು ಫಿಲ್ಟರ್ ನೀರಿಗಿಂತ ಉತ್ತಮವಾಗಿರುತ್ತದೆ. ನೂತನ ಪ್ರಯೋಗಾಲಯ ಮತ್ತು ಸೋರಿಕೆ ಪತ್ತೆ ಸೆಲ್​ನ್ನು ದೆಹಲಿ ಜಲಮಂಡಳಿ ಹೊಂದಲಿದೆ ಎಂದೂ ಮುಖ್ಯಮಂತ್ರಿ ವಿವರಿಸಿದರು. ಅಧಿಕಾರಕ್ಕೆ ಬಂದ ತತ್ ಕ್ಷಣವೇ ನಾವು ವಿದ್ಯುತ್ ಬಿಲ್ ಇಳಿಸಿದ್ದೇವೆ. ಈಗ ರಾಷ್ಟ್ರದಲ್ಲೇ ಅತ್ಯಂತ ಕಡಿಮೆ ವಿದ್ಯುತ್ ದರ ಇರುವ ಮೂರು ರಾಜ್ಯಗಳಲ್ಲಿ ದೆಹಲಿಯೂ ಒಂದು ಎಂದು ಕೇಜ್ರಿವಾಲ್ ನುಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT