ಮುಖ್ಯಮಂತ್ರಿ ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಹವಾಮಾನ ವೈಪರೀತ್ಯ; ಹುತಾತ್ಮ ಯೋಧ ನಾಗೇಶ್ ಮೃತದೇಹ ರವಾನೆ ವಿಳಂಬ

ಸಿಯಾಚಿನ್ ನಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಹುತಾತ್ಮ ಕರ್ನಾಟಕದ ಯೋಧರಾದ ನಾಗೇಶ್ ಹಾಗೂ ಮಹೇಶ್ ಅವರ ಪಾರ್ಥೀವ ಶರೀರಗಳನ್ನು ರಾಜ್ಯಕ್ಕೆ ತರಲು ವಿಳಂಬವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ...

ಮೈಸೂರು; ಸಿಯಾಚಿನ್ ನಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಹುತಾತ್ಮ ಕರ್ನಾಟಕದ ಯೋಧರಾದ ನಾಗೇಶ್ ಹಾಗೂ ಮಹೇಶ್ ಅವರ ಪಾರ್ಥೀವ ಶರೀರಗಳನ್ನು ರಾಜ್ಯಕ್ಕೆ ತರಲು ವಿಳಂಬವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ. 
ಈ ಕುರಿತಂತೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿಯಾಚಿನ್ ನಲ್ಲಿ ಇಂದೂ ಸಹ ಹಿಮಪಾತವಾಗುತ್ತಿದ್ದು, ಹೆಲಿಕಾಪ್ಟರ್, ವಿಮಾನ ಸಂಚಾರಕ್ಕೆ ಹವಾಮಾನ ವೈಪರೀತ್ಯ ಉಂಟಾಗಿದೆ. ಹೀಗಾಗಿ ಪಾರ್ಥೀವ ಶರೀರಗಳನ್ನು ರಾಜ್ಯಕ್ಕೆ ತರಲು ವಿಳಂಬವಾಗುತ್ತಿದೆ. ನಾಳೆ ಪಾರ್ಥೀವ ಶರೀರಗಳನ್ನು ರಾಜ್ಯಕ್ಕೆ ತರುವ ಸಾಧ್ಯತೆಗಳಿದೆ ಎಂದು ಹೇಳಿದ್ದಾರೆ. 
ಸಿಯಾಚಿನ್ ನಲ್ಲಿ ಫೆ.3 ರಂದು ಸಂಭವಿಸಿದ ಭೀಕರ ಹಿಮಪಾತಕ್ಕೆ ಭಾರತದ 10 ಯೋಧರು ಮೃತಪಟ್ಟಿದ್ದರು. ಮೃತಪಟ್ಟವರಲ್ಲಿ ಮೂವರು ಕರ್ನಾಟಕದ ಯೋಧರಾಗಿದ್ದು, ಮೂವರಲ್ಲಿ ಹನುಮಂತಪ್ಪ ಕೊಪ್ಪದ್ ಅವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಇದೀಗ ನಾಗೇಶ್ ಹಾಗೂ ಮಹೇಶ್ ಅವರ ಮೃತದೇಹಗಳು ಪತ್ತೆಯಾಗಿದ್ದು, ಶೀಘ್ರದಲ್ಲೇ ಈ ಇಬ್ಬರು ಯೋಧರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT