ಮೈಸೂರು; ಸಿಯಾಚಿನ್ ನಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಹುತಾತ್ಮ ಕರ್ನಾಟಕದ ಯೋಧರಾದ ನಾಗೇಶ್ ಹಾಗೂ ಮಹೇಶ್ ಅವರ ಪಾರ್ಥೀವ ಶರೀರಗಳನ್ನು ರಾಜ್ಯಕ್ಕೆ ತರಲು ವಿಳಂಬವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.
ಈ ಕುರಿತಂತೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿಯಾಚಿನ್ ನಲ್ಲಿ ಇಂದೂ ಸಹ ಹಿಮಪಾತವಾಗುತ್ತಿದ್ದು, ಹೆಲಿಕಾಪ್ಟರ್, ವಿಮಾನ ಸಂಚಾರಕ್ಕೆ ಹವಾಮಾನ ವೈಪರೀತ್ಯ ಉಂಟಾಗಿದೆ. ಹೀಗಾಗಿ ಪಾರ್ಥೀವ ಶರೀರಗಳನ್ನು ರಾಜ್ಯಕ್ಕೆ ತರಲು ವಿಳಂಬವಾಗುತ್ತಿದೆ. ನಾಳೆ ಪಾರ್ಥೀವ ಶರೀರಗಳನ್ನು ರಾಜ್ಯಕ್ಕೆ ತರುವ ಸಾಧ್ಯತೆಗಳಿದೆ ಎಂದು ಹೇಳಿದ್ದಾರೆ.
ಸಿಯಾಚಿನ್ ನಲ್ಲಿ ಫೆ.3 ರಂದು ಸಂಭವಿಸಿದ ಭೀಕರ ಹಿಮಪಾತಕ್ಕೆ ಭಾರತದ 10 ಯೋಧರು ಮೃತಪಟ್ಟಿದ್ದರು. ಮೃತಪಟ್ಟವರಲ್ಲಿ ಮೂವರು ಕರ್ನಾಟಕದ ಯೋಧರಾಗಿದ್ದು, ಮೂವರಲ್ಲಿ ಹನುಮಂತಪ್ಪ ಕೊಪ್ಪದ್ ಅವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಇದೀಗ ನಾಗೇಶ್ ಹಾಗೂ ಮಹೇಶ್ ಅವರ ಮೃತದೇಹಗಳು ಪತ್ತೆಯಾಗಿದ್ದು, ಶೀಘ್ರದಲ್ಲೇ ಈ ಇಬ್ಬರು ಯೋಧರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos