ವೆಂಕಯ್ಯ ನಾಯ್ಡು 
ಪ್ರಧಾನ ಸುದ್ದಿ

ರಸ್ತೆಗೆ ಕಸ ಎಸೆಯುವವರಿಗೆ ದಂಡ ವಿಧಿಸಲು ಚಿಂತನೆ: ವೆಂಕಯ್ಯ ನಾಯ್ಡು

ದೇಶದ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿಯಮ ಪಾಲಿಸದವರಿಗೆ ದಂಡ ವಿಧಿಸುವ ಕುರಿತು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕೇಂದ್ರ

ಮಂಗಳೂರು: ದೇಶದ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿಯಮ ಪಾಲಿಸದವರಿಗೆ ದಂಡ ವಿಧಿಸುವ ಕುರಿತು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.
ನಗರದ ಶ್ರೀ ರಾಮಕೃಷ್ಣ ಮಠದಲ್ಲಿ ‘40 ವಾರಗಳ’ ಸ್ವಚ್ಛ ಮಂಗಳೂರು ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ನಾಯ್ಡು, ಸಿಂಗಾಪುರ ಸ್ವಚ್ಛವಾಗಿರಲು ಕಾರಣ ಸಾರ್ವಜನಿಕ ಸ್ಥಳದಲ್ಲಿ ಕಸ ಚೆಲ್ಲುವವರಿಗೆ ದಂಡ ವಿಧಿಸುತ್ತಿರುವುದು. ನಮ್ಮಲ್ಲಿ ಏಕಾಏಕಿ ದಂಡ ಹಾಕಲು ಸಾಧ್ಯವಿಲ್ಲ. ಸ್ವಚ್ಛ ಭಾರತ ಆಂದೋಲನದ ಮೂಲಕ ದೇಶಾದ್ಯಂತ ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುವುದು. ನಂತರ ದಂಡ ಹಾಕುವ ಬಗ್ಗೆ ನಿರ್ಧರಿಸಲಾಗುವುದು ಎಂದರು, 
ನಗರದ ಜೀವನ ಅವ್ಯವಸ್ಥಿತವಾಗಿರಬಾರದು ಎಂದ ಕೇಂದ್ರ ಸಚಿವರು, ಸಾರ್ವಜನಿಕ ಶೌಚಗೃಹ ಸೇರಿ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು. ಸ್ವಚ್ಛ ಭಾರತ ಮಿಶನ್ ಅಡಿ 2019ರ ವೇಳೆಗೆ 1.04 ಕೋಟಿ ರೂ. ವೈಯಕ್ತಿಕ ಶೌಚಗೃಹ ನಿರ್ವಣ, 5.08 ಲಕ್ಷ ಸಮುದಾಯ ಮತ್ತು ಸಾರ್ವಜನಿಕ ಶೌಚಗೃಹ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ರಾಜಕೀಯವಿಲ್ಲ: 20 ನಗರಗಳನ್ನು ಸ್ಮಾರ್ಟ್ ಸಿಟಿಗೆ ಆಯ್ಕೆ ಮಾಡಿರುವುದರಲ್ಲಿ ರಾಜಕೀಯ ಮಾಡಲಾಗಿದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಆಯಾ ಮಹಾನಗರ ಪಾಲಿಕೆಗಳು ನೀಡಿದ ಪ್ರಸ್ತಾವನೆ ಆಧಾರದಲ್ಲಿ ತಜ್ಞರ ಸಮಿತಿ ರಾಜಕೀಯ ರಹಿತವಾಗಿ ಸ್ಮಾರ್ಟ್ ಸಿಟಿಗೆ ನಗರಗಳ ಆಯ್ಕೆ ನಡೆಸಿವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಧೀಶರ ಮೇಲಿನ ದಾಳಿ ಖಂಡಿಸಿದ ಮಮತಾ; ರಾಷ್ಟ್ರಪತಿ ಆಳ್ವಿಕೆಗಾಗಿ ಬಿಜೆಪಿ 'ಸಂಚು' ಎಂದ ದೀದಿ

ಆಮ್ ಆದ್ಮಿ ದನಿಯಾಗಿದ್ದ ರಾಘವ್ ಚಡ್ಡಾಗೆ AAP ಶಾಕ್: ರಾಜ್ಯಸಭೆ ಉಪನಾಯಕ ಸ್ಥಾನದಿಂದ ವಜಾ, ಮಾತನಾಡಲು ನಿರ್ಬಂಧ!

ಗಡಿಯಲ್ಲಿ ಹದ್ದು ಮೀರಿದ್ರೆ ಹುಷಾರ್: ಇರಾನ್ ವಾರ್ ನಡುವೆ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ವಾರ್ನಿಂಗ್!

ಅಮೆರಿಕಕ್ಕೆ 'ಅವಮಾನ'ವಾಗುವವರೆಗೂ ಯುದ್ಧ ಮುಂದುವರಿಯುತ್ತದೆ: ಟ್ರಂಪ್ ಹೇಳಿಕೆ ತಳ್ಳಿಹಾಕಿದ ಇರಾನ್ ಸೇನೆ!

ಕೊನೆಗೂ ಇರಾನ್ ವಿರುದ್ಧದ ಯುದ್ಧ ಅಂತ್ಯ?: ಹಾರ್ಮುಜ್ ಜಲಸಂಧಿ ನಿರ್ಬಂಧ ತೆರವಿಗೆ US- Iran ನಡುವೆ ಡೀಲ್ ಮಾತುಕತೆ!

SCROLL FOR NEXT