ಹಿಮಪಾತದಲ್ಲಿ ಹುತಾತ್ಮರಾದ ಎಚ್.ಡಿ.ಕೋಟೆಯ ಪಿ.ಎನ್. ಮಹೇಶ್ ಹಾಗೂ ಹಾಸನದ ಟಿ.ಟಿ.ನಾಗೇಶ್ 
ಪ್ರಧಾನ ಸುದ್ದಿ

ಮೃತ ಯೋಧರ ಪಾರ್ಥಿವ ಶರೀರ ಇಂದು ರಾಜ್ಯಕ್ಕೆ?

ಸಿಯಾಚಿನ್ ನಲ್ಲಿ ಸಂಭವಿಸಿದೆ ಭೀಕರ ಹಿಮಪಾತದಲ್ಲಿ ಮೃತಪಟ್ಟ ಯೋಧರಾದ ಎಚ್.ಡಿ.ಕೋಟೆಯ ಪಿ.ಎನ್. ಮಹೇಶ್, ಹಾಸನದ ಟಿ.ಟಿ.ನಾಗೇಶ್ ಅವರ ಪಾರ್ಥೀವ ಶರೀರಗಳು ಇಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

ಬೆಂಗಳೂರು: ಸಿಯಾಚಿನ್ ನಲ್ಲಿ ಸಂಭವಿಸಿದೆ ಭೀಕರ ಹಿಮಪಾತದಲ್ಲಿ ಮೃತಪಟ್ಟ ಯೋಧರಾದ ಎಚ್.ಡಿ.ಕೋಟೆಯ ಪಿ.ಎನ್. ಮಹೇಶ್, ಹಾಸನದ ಟಿ.ಟಿ.ನಾಗೇಶ್ ಅವರ ಪಾರ್ಥೀವ ಶರೀರಗಳು ಇಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಮೃತ ಯೋಧರ ಪಾರ್ಥೀವ ಶರೀರ ನಿನ್ನೆ ರಾಜ್ಯಕ್ಕೆ ಆಗಮಿಸಬೇಕಿತ್ತು. ಆದರೆ, ಹವಾಮಾನ ವೈಪರೀತ್ಯವುಂಟಾಗಿ ವಿಮಾನ ಹಾರಾಟಕ್ಕೆ ಸಮಸ್ಯೆಯುಂಟಾದ ಕಾರಣ ಸಾಧ್ಯವಾಗಿರಲಿಲ್ಲ. ಇಂದು ಹಮಾಮಾನದಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಿದ್ದರೆ ಪಾರ್ಥಿವ ಶರೀರಗಳು ರಾಜ್ಯಕ್ಕೆ ಕರೆತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. 
ಸಿಯಾಚಿನ್ ನಲ್ಲಿ ಫೆ.3 ರಂದು ಸಂಭವಿಸಿದ ಭೀಕರ ಹಿಮಪಾತಕ್ಕೆ ಭಾರತದ 10 ಯೋಧರು ಮೃತಪಟ್ಟಿದ್ದರು. ಮೃತಪಟ್ಟವರಲ್ಲಿ ಮೂವರು ಕರ್ನಾಟಕದ ಯೋಧರಾಗಿದ್ದು, ಮೂವರಲ್ಲಿ ಹನುಮಂತಪ್ಪ ಕೊಪ್ಪದ್ ಅವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಇದೀಗ ನಾಗೇಶ್ ಹಾಗೂ ಮಹೇಶ್ ಅವರ ಮೃತದೇಹಗಳು ಪತ್ತೆಯಾಗಿದ್ದು, ಶೀಘ್ರದಲ್ಲೇ ಈ ಇಬ್ಬರು ಯೋಧರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT