ರಾಜ್ಯದಲ್ಲಿ ಉಪಚುನಾವಣಾ ಸಮರ: 2 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ 
ಪ್ರಧಾನ ಸುದ್ದಿ

ಉಪಚುನಾವಣೆ: ಹೆಬ್ಬಾಳ, ದೇವದುರ್ಗ ಬಿಜೆಪಿ ತೆಕ್ಕೆಗೆ; ಬೀದರ್‏ನಲ್ಲಿ ಕಾಂಗ್ರೆಸ್

ಭಾರೀ ಕುತೂಹಲ ಕೆರಳಿಸಿದ್ದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ಹೆಬ್ಬಾಳ ಹಾಗೂ ದೇವದುರ್ಗದಲ್ಲಿ ಕಮಲ ತನ್ನ ವಿಜಯಪತಾಕೆಯನ್ನು ಹಾರಿಸಿದೆ...

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶ ಹೊರಬಿದ್ದಿದೆ. ಹೆಬ್ಬಾಳ ಹಾಗೂ ದೇವದುರ್ಗದಲ್ಲಿ ಕಮಲ ತನ್ನ ವಿಜಯಪತಾಕೆಯನ್ನು ಹಾರಿಸಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್'ಗೆ ಮುಖಭಂಗವಾಗಿದೆ. 
ಮತಎಣಿಕೆ ಆರಂಭವಾದಾಗಿನಿಂದಲೂ ಬಿಜೆಪಿಯ ದೇವದುರ್ಗ ಅಭ್ಯರ್ಥಿ ಶಿವನಗೌಡ ನಾಯಕ್ ಹಾಗೂ ಹೆಬ್ಬಾಳ ಕ್ಷೇತ್ರದ ವೈ.ಎ. ನಾರಾಯಣಸ್ವಾಮಿ ಅವರು ಮುನ್ನಡೆ ಸಾಧಿಸುತ್ತಲೇ ಬಂದಿದ್ದರು. ಇದರಂತೆ ಮತಎಣಿಕೆ ಆರಂಭವಾದ ಕೆಲವು ಗಂಟೆಗಳಲ್ಲೇ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ ಎಂದು ಹೇಳಲಾಗುತ್ತಿತ್ತು. ಬಿಜೆಪಿ ಕಾರ್ಯಕರ್ತರು ಕೂಡ ವಿಜಯದ ಪತಾಕೆ ನಮ್ಮದೆ ಎಂಬಂತೆ ಹೆಬ್ಬಾಳ ಹಾಗೂ ದೇವದುರ್ಗದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಇದೀಗ ಫಲಿತಾಂಶದ ಸ್ಪಷ್ಟನೆ ಹೊರಬಿದ್ದಿದ್ದು, ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. 
ಇದರಂತೆ ಕಾಂಗ್ರೆಸ್ ಪಕ್ಷ ಕೂಡ ಬೀದರ್ ನಲ್ಲಿ ಭಾರೀ ಅಂತರದಲ್ಲಿ ಗೆಲವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಅವರನ್ನು ಹಿಂದಿಕ್ಕಿ ಬೀದರ್ ನಲ್ಲಿ ಗೆಲುವಿನ ನಗೆ ಬೀರಿದ್ದಾರೆ.
ಫೆಬ್ರುವರಿ 13ರಂದು ಹೆಬ್ಬಾಳ, ದೇವದುರ್ಗ ಮತ್ತು ಬೀದರ್ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು. ಹೆಬ್ಬಾಳದಲ್ಲಿ ಶೇ.46ರಷ್ಟು, ದೇವದುರ್ಗದಲ್ಲಿ 61ರಷ್ಟು, ಬೀದರ್ ಕ್ಷೇತ್ರದಲ್ಲಿ ಶೇ.56ರಷ್ಟು ಮತದಾನವಾಗಿತ್ತು. ಬೀದರ್ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ (ಬಿಜೆಪಿ), ಹೆಬ್ಬಾಳದ(ಬಿಜೆಪಿ) ಶಾಸಕರಾಗಿದ್ದ ಜಗದೀಶ್ ಕುಮಾರ್, ದೇವದುರ್ಗದ(ಕಾಂಗ್ರೆಸ್) ಶಾಸಕ ವೆಂಕಟೇಶ್ ನಾಯಕ್ ನಿಧನವಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು. ಇದರಂತೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಿದ್ದು, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ