ವಿ ಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ 
ಪ್ರಧಾನ ಸುದ್ದಿ

ಮುಜಫರ್ ನಗರ ಗಲಭೆ ಪ್ರಕರಣ: ಕೋರ್ಟ್ ಗೆ ಹಾಜರಾದ ಸಾಧ್ವಿ ಪ್ರಾಚಿ

ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾದದ್ದರಿಂದ ಕೋರ್ಟ್ ಕಳುಹಿಸಿದ್ದ ಹಲವಾರು ವಾರಂಟ್ ಗಳ ನಂತರ ಇಂದು ವಿ ಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ,

ಮುಜಫರ್ ನಗರ: ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾದದ್ದರಿಂದ ಕೋರ್ಟ್ ಕಳುಹಿಸಿದ್ದ ಹಲವಾರು ವಾರಂಟ್ ಗಳ ನಂತರ ಇಂದು ವಿ ಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ, ೨೦೧೩ರ ಮುಜಫರ್ ನಗರ ಗಲಭೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

೨೦೦೦೦ ರೂ ಬಾಂಡ್ ನೀಡಿ ಮುಂದಿನ ದಿನಾಂಕಕ್ಕೆ ಕೋರ್ಟ್ ಗೆ ಹಾಜರಾಗುತ್ತೇನೆ ಎಂಬ ಮುಚ್ಚಳಿಕೆ ನೀಡಿದ್ದಕ್ಕೆ ಅವರ ವಿರುದ್ಧ ಹೊರಡಿಸಲಾಗಿದ್ದ ಜಾಮೀನು ವಾರಂಟ್ ಅನ್ನು ಕೋರ್ಟ್ ಹಿಂತೆಗೆದುಕೊಂಡಿದೆ.

ಈ ಹಿಂದೆ ಡಿಸೆಂಬರ್ ೧೮ ಮತ್ತು ಜನವರಿ ೨೩ ರ ವಿಚಾರಣೆಗೆ ಗೈರುಹಾಜರಾದದ್ದಕ್ಕೆ ಕೋರ್ಟ್ ಸಾಧ್ವಿ ವಿರುದ್ಧ ವಾರಂಟ್ ಹೊರಡಿಸಿತ್ತು.

ಮುಂದಿನ ವಿಚಾರಣೆ ಫೆಬ್ರವರಿ ೨೩ ಕ್ಕೆ ಮುಂದೂಡಲಾಗಿದೆ. ಆಗಸ್ಟ್ ಮತ್ತು ಸೆಪ್ಟಂಬರ್ ೨೦೧೩ರಲ್ಲಿ ನಡೆದ ಮುಜಫರ್ ನಗರ ಗಲಭೆಯಲ್ಲಿ ೬೦ಕ್ಕೂ ಹೆಚ್ಚು ಜನ ಹತ್ಯೆಯಾಗಿದ್ದಲ್ಲದೆ, ೪೦ ಸಾವಿರಕ್ಕೂ ಹೆಚ್ಚು ಜನ ಸ್ಥಳಾಂತರವಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT