ವಿ ಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ 
ಪ್ರಧಾನ ಸುದ್ದಿ

ಮುಜಫರ್ ನಗರ ಗಲಭೆ ಪ್ರಕರಣ: ಕೋರ್ಟ್ ಗೆ ಹಾಜರಾದ ಸಾಧ್ವಿ ಪ್ರಾಚಿ

ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾದದ್ದರಿಂದ ಕೋರ್ಟ್ ಕಳುಹಿಸಿದ್ದ ಹಲವಾರು ವಾರಂಟ್ ಗಳ ನಂತರ ಇಂದು ವಿ ಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ,

ಮುಜಫರ್ ನಗರ: ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾದದ್ದರಿಂದ ಕೋರ್ಟ್ ಕಳುಹಿಸಿದ್ದ ಹಲವಾರು ವಾರಂಟ್ ಗಳ ನಂತರ ಇಂದು ವಿ ಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ, ೨೦೧೩ರ ಮುಜಫರ್ ನಗರ ಗಲಭೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

೨೦೦೦೦ ರೂ ಬಾಂಡ್ ನೀಡಿ ಮುಂದಿನ ದಿನಾಂಕಕ್ಕೆ ಕೋರ್ಟ್ ಗೆ ಹಾಜರಾಗುತ್ತೇನೆ ಎಂಬ ಮುಚ್ಚಳಿಕೆ ನೀಡಿದ್ದಕ್ಕೆ ಅವರ ವಿರುದ್ಧ ಹೊರಡಿಸಲಾಗಿದ್ದ ಜಾಮೀನು ವಾರಂಟ್ ಅನ್ನು ಕೋರ್ಟ್ ಹಿಂತೆಗೆದುಕೊಂಡಿದೆ.

ಈ ಹಿಂದೆ ಡಿಸೆಂಬರ್ ೧೮ ಮತ್ತು ಜನವರಿ ೨೩ ರ ವಿಚಾರಣೆಗೆ ಗೈರುಹಾಜರಾದದ್ದಕ್ಕೆ ಕೋರ್ಟ್ ಸಾಧ್ವಿ ವಿರುದ್ಧ ವಾರಂಟ್ ಹೊರಡಿಸಿತ್ತು.

ಮುಂದಿನ ವಿಚಾರಣೆ ಫೆಬ್ರವರಿ ೨೩ ಕ್ಕೆ ಮುಂದೂಡಲಾಗಿದೆ. ಆಗಸ್ಟ್ ಮತ್ತು ಸೆಪ್ಟಂಬರ್ ೨೦೧೩ರಲ್ಲಿ ನಡೆದ ಮುಜಫರ್ ನಗರ ಗಲಭೆಯಲ್ಲಿ ೬೦ಕ್ಕೂ ಹೆಚ್ಚು ಜನ ಹತ್ಯೆಯಾಗಿದ್ದಲ್ಲದೆ, ೪೦ ಸಾವಿರಕ್ಕೂ ಹೆಚ್ಚು ಜನ ಸ್ಥಳಾಂತರವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT