ನಗರದಲ್ಲಿ ದುಷ್ಕರ್ಮಿಗಳ ಪುಂಡಾಟ: 10 ಹೆಚ್ಚು ವಾಹನಗಳು ಜಖಂ (ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ನಗರದಲ್ಲಿ ದುಷ್ಕರ್ಮಿಗಳ ಪುಂಡಾಟ: 10ಕ್ಕೂಹೆಚ್ಚು ವಾಹನಗಳು ಜಖಂ

ಉದ್ಯಾನ ನಗರಿಯಲ್ಲಿ ದುಷ್ಕರ್ಮಿಗಳ ಅಟ್ಟಾಹಾಸ ಮತ್ತೆ ಮುಂದುವರೆದಿದ್ದು, ಮನೆಯೆದುರು ನಿಲ್ಲಿಸಿದ್ದ 10 ಹೆಚ್ಚು ವಾಹನಗಳ ಮೇಲೆ ದಾಳಿ ಮಾಡಿರುವ ಘಟನೆ ಬನಶಂಕರಿಯ ಪ್ರಗತಿಪುರದಲ್ಲಿ ಗುರುವಾರ ನಡೆದಿದೆ...

ಬೆಂಗಳೂರು: ಉದ್ಯಾನ ನಗರಿಯಲ್ಲಿ ದುಷ್ಕರ್ಮಿಗಳ ಅಟ್ಟಾಹಾಸ ಮತ್ತೆ ಮುಂದುವರೆದಿದ್ದು, ಮನೆಯೆದುರು ನಿಲ್ಲಿಸಿದ್ದ 10 ಹೆಚ್ಚು ವಾಹನಗಳ ಮೇಲೆ ದಾಳಿ ಮಾಡಿರುವ ಘಟನೆ ಬನಶಂಕರಿಯ ಪ್ರಗತಿಪುರದಲ್ಲಿ ಗುರುವಾರ ನಡೆದಿದೆ. 
ಇಂದು ಬೆಳಿಗ್ಗೆ ಕಾರಿನಲ್ಲಿ ಬಂದು ದುಷ್ಕರ್ಮಿಗಳು ಗುಂಪೊಂದು ರಾಡ್ ತೆಗೆದುಕೊಂಡು ಮನೆಯೆದುರು ನಿಲ್ಲಿಸಲಾಗಿದ್ದ ವಾಹನಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಕಾರೊಂದರಲ್ಲಿ ಚಾಲಕನೊಬ್ಬ ಮಲಗಿದ್ದ ಕಾರಣ ಗುಂಪಿನ ಪುಂಡಾಟಿಕೆ ಕಂಡು ಕೂಗಿದ್ದಾನೆ. ಈ ವೇಳೆ ಚಾಲಕನಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿ ತಮ್ಮ ಪುಂಡಾಟವನ್ನು ಮುಂದುವರೆಸಿದ್ದಾರೆ. ಘಟನೆಯಲ್ಲಿ ಕಾರು, ಆಟೋ, ಟೆಂಪೋ ಸೇರಿ 10 ವಾಹನಗಳು ಜಖಂಗೊಂಡಿದೆ ಎಂದು ಹೇಳಲಾಗುತ್ತಿದೆ. 
ಪ್ರಸ್ತುತ ಕುಮಾರಸ್ವಾಮಿ ಲೇ ಔಟ್'ನಲ್ಲಿ ಪ್ರಕರಣ ದಾಖಲಾಗಿತ್ತು, ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
ನಿನ್ನೆ ಕೂಡ ಉತ್ತರಹಳ್ಳಿಯಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ದುಷ್ಕರ್ಮಿಗಳ ಗುಂಪೊಂದು ವಾಹನಗಳ ಮೇಲೆ ದಾಳಿ ಮಾಡಿ ಹಲವು ವಾಹನಗಳನ್ನು ಜಖಂಗೊಳಿಸಿದ್ದರು. ಇಂದು ಕೂಡ ಇದೇ ರೀತಿಯ ಘಟನೆ ಬನಶಂಕರಿಯಲ್ಲಿ ನಡೆದಿದ್ದು, ಎರಡೂ ಘಟನೆಗಳಲ್ಲೂ ಒಂದೇ ಗುಂಪಿನ ಕೈವಾಡಿವಿರುವುದಾಗಿ ಹಲವು ಶಂಕೆಗಳು ವ್ಯಕ್ತವಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!