ಮುಧೋಳ ನಾಯಿ 
ಪ್ರಧಾನ ಸುದ್ದಿ

ಹುತಾತ್ಮ ಹನುಮಂತಪ್ಪ ಸ್ಮರಣಾರ್ಥ: ಸೇನೆಗೆ 6 ಮುಧೋಳ ನಾಯಿ ಹಸ್ತಾಂತರ

ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್‌ನಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾದ ಬೆಟದೂರಿನ ಸೈನಿಕ ಲ್ಯಾನ್ಸ್‌ ನಾಯಕ್‌ ಹನುಮಂತಪ್ಪ ಕೊಪ್ಪದ್...

ಬಾಗಲಕೋಟೆ: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್‌ನಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾದ ಬೆಟದೂರಿನ ಸೈನಿಕ ಲ್ಯಾನ್ಸ್‌ ನಾಯಕ್‌ ಹನುಮಂತಪ್ಪ ಕೊಪ್ಪದ್ ಸ್ಮರಣಾರ್ಥ 6 ಮುಧೋಳ ನಾಯಿಗಳನ್ನು ಸೇನೆಗೆ ಹಸ್ತಾಂತರಿಸಲಾಗಿದೆ.

ಕರ್ನಾಟಕ ಪಶು ವೈದ್ಯಕೀಯ ವಿವಿ ವ್ಯಾಪ್ತಿಯ ಮುಧೋಳದ ಶ್ವಾನ ಸಂಶೋಧನಾ ಕೇಂದ್ರ ವತಿಯಿಂದ ನಾಯಿಗಳನ್ನು ಹಸ್ತಾಂತರಿಸಲಾಗಿದೆ. ಕೇಂದ್ರದಲ್ಲಿ ಬೆಳೆದ 3 ಗಂಡು ಮತ್ತು 3 ಹೆಣ್ಣು  ಶ್ವಾನಗಳನ್ನು ಬೆಂಗಳೂರಿನ ಹೆಬ್ಟಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು. ಇದರೊಂದಿಗೆ ಸೇನೆಯಲ್ಲಿ ಇದೇ ಮೊದಲ ಬಾರಿಗೆ ಮುಧೋಳ ನಾಯಿಗಳ ಪ್ರವೇಶ ಆದಂತಾಗಿದೆ.

ಭಾರತೀಯ ಸೇನೆಯು ಉತ್ತರ ಪ್ರದೇಶದ ಮೇರಠ್ ನಲ್ಲಿ ಸೇನಾ ಶ್ವಾನ ಗಳ ತರಬೇತಿ ಘಟಕ ಹೊಂದಿದೆ. ಇಲ್ಲಿ ಶ್ವಾನಗಳಿಗೆ ಬಾಂಬ್‌ ಪತ್ತೆ ಹಚ್ಚುವಿಕೆ, ಪತ್ತೇದಾರಿ ಚಟುವಟಿಕೆ, ರಕ್ಷಣಾ ಕಾರ್ಯದ ಕುರಿತು ತರಬೇತಿ ನೀಡಲಾಗುತ್ತದೆ. ಭಾರತೀಯ ಸೇನೆಯಲ್ಲಿ ಈವರೆಗೆ ಲ್ಯಾಬ್ರಡಾರ್‌, ಜರ್ಮನ್‌ ಶಫರ್ಡ್‌, ಬೆಲ್ಜಿಯನ್‌ ಶಫರ್ಡ್‌ನಂತಹ ವಿದೇಶಿ ಶ್ವಾನ ತಳಿಗಳನ್ನು ಬಳಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಸೇನೆಗೆ ದೇಶಿ ತಳಿಯಾದ ಮುಧೋಳ ನಾಯಿಗಳ ಪ್ರವೇಶವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT