ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಭದ್ರತಾ ಪಡೆ ಎನ್ ಕೌಂಟರ್ ಗೆ ಜಾರ್ಖಂಡ್ ನಲ್ಲಿ ನಾಲ್ವರು ನಕ್ಸಲರು ಬಲಿ

ಭದ್ರತಾ ಪಡೆಗಳು ಜಾರ್ಖಂಡ್‌ನಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆಯೊಬ್ಬರು ಸೇರಿದಂತೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ ...

ರಾಂಚಿ:  ಭದ್ರತಾ ಪಡೆಗಳು ಜಾರ್ಖಂಡ್‌ನಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆಯೊಬ್ಬರು ಸೇರಿದಂತೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ರಾತ್ರಿ ನವಾದಿಹ್‌ ಅರಣ್ಯದ ಗಡಿಯಲ್ಲಿರುವ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ರಾಂಚಿಯಿಂದ 35 ಕಿಲೋ ಮೀಟರ್ ದೂರದ ರಾಂಚಿ–ಜೆಮ್‌ಶ್ಷೆಡ್‌ಪುರ  ರಾಷ್ಟ್ರೀಯ ಹೆದ್ದಾರಿ 33ರಲ್ಲಿರುವ  ಘಗ್ರಾಬೆಡಾ ಗ್ರಾಮದಲ್ಲಿ  ಈ ಎನ್‌ಕೌಂಟರ್ ನಡೆದಿದೆ ಎಂದು ಗ್ರಾಮೀಣ ವಲಯದ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜಕುಮಾರ್ ಲಕ್ರಾ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಅರಣ್ಯದಲ್ಲಿ ನಕ್ಸಲರು ಸೇರಿರುವ ಕುರಿತು ಖಚಿತ ಸುಳಿವಿನ ಮೇರೆಗೆ ಜಿಲ್ಲಾ ಸಶಸ್ತ್ರ ಹಾಗೂ ಸಿಆರ್‌ಪಿಎಫ್‌ ಸೇರಿಕೊಂಡು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿವೆ ಎಂದು ಲಕ್ರಾ ಅವರು ಹೇಳಿದ್ದಾರೆ.

ಕಾರ್ಯಾಚರಣೆಯಲ್ಲಿ ತಲಾ  ಎರಡು ಎಸ್‌ಎಲ್‌ಆರ್‌ಗಳು ಹಾಗೂ 303 ರೈಫಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.  .





Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT