ಟಾಟಾ ಏಸ್ ಮೇಲೆ ಪಲ್ಟಿ ಹೊಡೆದ ಲಾರಿ: 12 ಮಂದಿ ದುರ್ಮರಣ (ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ಟಾಟಾ ಏಸ್ ಮೇಲೆ ಪಲ್ಟಿ ಹೊಡೆದ ಲಾರಿ: 12 ಮಂದಿ ದುರ್ಮರಣ

ನಗರದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭೀಕರ ಅಪಘಾತ ಸಂಭವಿಸಿವಿದ್ದು, ಟಾಟಾ ಏಸ್ ಮೇಲೆ ಲಾರಿ ಪಲ್ಟಿ ಹೊಡೆದ ಪರಿಣಾಮ 12 ಮಂದಿ ದುರ್ಮರಣ ಹೊಂದಿರುವ ಘಟನೆ ಶುಕ್ರವಾರ ನಡೆದಿದೆ...

ಬೆಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭೀಕರ ಅಪಘಾತ ಸಂಭವಿಸಿವಿದ್ದು, ಟಾಟಾ ಏಸ್ ಮೇಲೆ ಲಾರಿ ಪಲ್ಟಿ ಹೊಡೆದ ಪರಿಣಾಮ 12 ಮಂದಿ ದುರ್ಮರಣ ಹೊಂದಿರುವ ಘಟನೆ ಶುಕ್ರವಾರ ನಡೆದಿದೆ. 
12 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಚಿತ್ರದುರ್ಗದಿಂದ ಹೊಸಪೇಟೆಗೆ ಹೋಗುತ್ತಿತ್ತು. ಈ ವೇಳೆ ಕಬ್ಬಿಣ ತುಂಬಿದ ಲಾರಿಯೊಂದು ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದೆ. ನಂತರ ಟಾಟಾ ಏಸ್ ಮೇಲೆ ಪಲ್ಟಿ ಹೊಡೆದ ಪರಿಣಾಮ ವಾಹನದಲ್ಲಿದ್ದ 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ಮೃತರೆಲ್ಲರೂ ಚಿತ್ರದುರ್ಗದ ಕ್ಯಾಸಾಪುರ, ಕೊಡಗಹಳ್ಳಿ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಮೃತರನ್ನು ಗಂಗಮ್ಮ (60), ಸುದೀಪ್ (17), ಮಂಜುನಾಥ್ (40), ತಿಪ್ಪೇಸ್ವಾಮಿ (45), ಕೊಲ್ಲಪ್ಪ (68), ಮಂಜಣ್ಣ (61), ಚೇತಮ್ (11), ದುಗ್ಗಪ್ಪ (51), ನಾಗಣ್ಣ (45), ಗಂಗಣ್ಣ (43), ಚಾಲಕ ಕುಮಾರ್ (35), ಮಂಜಣ್ಣ (16) ಎಂದು ಗುರ್ತಿಸಲಾಗಿದೆ. ಡಿಕ್ಕಿ ಹೊಡೆದ ಲಾರಿ ಚಾಲಕ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಡಿಕ್ಕಿ ಹೊಡೆದ ವಾಹನದ ಸಂಖ್ಯೆ ಯುಪಿ 81, ಎಎಫ್ 5451 ಎಂದು ಹೇಳಲಾಗುತ್ತಿದ್ದು, ಟಾಟಾ ಏಸ್ ವಾಹನದ ಸಂಖ್ಯೆ ಕೆಎ 16, ಬಿ 9171 ಎಂದು ತಿಳಿದುಬಂದಿದೆ. ಸ್ಥಳಕ್ಕಾಗಮಿಸಿರುವ ಪೊಲೀಸರು ಲಾರಿ ಕೆಳಗೆ ಸಿಲುಕಿದ ಮೃತ ದೇಹಗಳನ್ನು ಹೊರತೆಗೆದಿದ್ದು, ಎಸ್ ಪಿ ಎಂ.ಎನ್.ಅನುಚೇತ್ ಅವರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ಇದೀಗ ತುರವನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT