ಜಾಟ್ ಸಮುದಾಯದ ಮೀಸಲಾತಿ ಆಗ್ರಹಿಸಿ ಗುರ್ಗಾಂವ್ -ದೆಹಲಿ ರಸ್ತೆ ತಡೆದು ಮಹಿಳೆಯರು ಪ್ರತಿಭಟನೆ ನಡೆಸಿದರು 
ಪ್ರಧಾನ ಸುದ್ದಿ

ದೆಹಲಿಗೆ ತಟ್ಟಿದ ಹರಿಯಾಣ ಪ್ರತಿಭಟನೆ ಬಿಸಿ: ನೀರು ಪೂರೈಕೆ ಸಂಪೂರ್ಣ ಬಂದ್, ನಾಳೆ ಶಾಲೆಗಳಿಗೆ ರಜೆ ಘೋಷಣೆ

ಹರಿಯಾಣದಲ್ಲಿ ನಡೆಯುತ್ತಿರುವ ಜಾಟ್ ಸಮುದಾಯದ ಮೀಸಲಾತಿ ಹೋರಾಟದ ಬಿಸಿ ರಾಷ್ಟ್ರ ರಾಜಧಾನಿ ದೆಹಲಿಗೂ...

ನವದೆಹಲಿ: ಹರಿಯಾಣದಲ್ಲಿ ನಡೆಯುತ್ತಿರುವ ಜಾಟ್ ಸಮುದಾಯದ ಮೀಸಲಾತಿ ಹೋರಾಟದ ಬಿಸಿ ರಾಷ್ಟ್ರ ರಾಜಧಾನಿ ದೆಹಲಿಗೂ ತಟ್ಟಿದೆ.
ಹರಿಯಾಣದ ಮುನಾಕ್ ಕೆನಾಲ್ ಮೂಲಕ ದೆಹಲಿಗೆ ತಲುಪಬೇಕಿದ್ದ ನೀರು ಸರಬರಾಜಿಗೆ ಅಡ್ಡಿಯಾಗಿದ್ದು, ನಾಳೆಯಿಂದ ದೆಹಲಿಯಲ್ಲಿ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಈ ಸಂಬಂಧ ಮಾಹಿತಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹರಿಯಾಣದಿಂದ ದೆಹಲಿಗೆ ಕುಡಿಯುವ ನೀರು ತಲುಪಿಲ್ಲ ಹಾಗಾಗಿ, ನಾಳೆಯಿಂದ ನೀರು ಪೂರೈಕೆ ಮಾಡಲು ಸಾಧ್ಯವಿಲ್ಲ. ಕೇವಲ ಆಸ್ಪತ್ರೆಗಳಿಗೆ, ಅಗ್ನಿಶಾಮಕ ದಳಕ್ಕೆ ಮಾತ್ರ ನೀರು ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ದೆಹಲಿಯ ಹಲವು ಪ್ರದೇಶಗಳಲ್ಲಿ ನೀರಿಗೆ ಭಾರಿ ಅಭಾವವಾದ ಹಿನ್ನಲೆಯಲ್ಲಿ ಹಿನ್ನಲೆಯಲ್ಲಿ ನಾಳೆ ಎಲ್ಲಾ ಶಾಲೆಗಳಿಗೆ ದೆಹಲಿ ಸರ್ಕಾರ ರಜೆ ಘೋಷಣೆ ಮಾಡಿದೆ. 
ದೆಹಲಿಯ ಜನರಿಗೆ ಪೂರೈಸಲು ಜನಮಂಡಳಿ ಬಳಿ ನೀರಿಲ್ಲ. ಭಾನುವಾರಕ್ಕೆ ನೀರು ಪೂರೈಸಬಹುದು. ಆದರೆ, ನಾಳೆಯಿಂದ ದೆಹಲಿಯಲ್ಲಿ ನೀರು ತೊಂದರೆ ಎದುರಿಸಬೇಕಾಗುತ್ತದೆ ಎಂದು ದೆಹಲಿ ಸಚಿವ ಕಪಿಲ್ ಮಿಶ್ರಾ ಹೇಳಿದ್ದಾರೆ. ಅಲ್ಲದೇ, ನೀರು ಅಭಾವ ಉಂಟಾದ ಹಿನ್ನಲೆಯಲ್ಲಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT