ಸಂತೋಷ್ ಹೆಗ್ದೆ 
ಪ್ರಧಾನ ಸುದ್ದಿ

ದೇಶದ ವಿರುದ್ಧ ಮಾತನಾಡುವುದನ್ನು ತಡೆಯಲು ದೇಶದ್ರೋಹ ಕಾನೂನು ಅಗತ್ಯ: ಸಂತೋಷ್ ಹೆಗ್ಡೆ

ದೇಶದ ವಿರುದ್ಧ ಮಾತನಾಡುವುದನ್ನು ಮತ್ತು ದೇಶದ ಹೆಸರು ಹಾಳು ಮಾಡುವುದನ್ನು ತಡೆಯಲು ದೇಶದ್ರೋಹದ ಕಾನೂನಿನ ಅಗತ್ಯ ಇದೆ ಎಂದು ಮಾಜಿ...

ನವದೆಹಲಿ: ದೇಶದ ವಿರುದ್ಧ ಮಾತನಾಡುವುದನ್ನು ಮತ್ತು ದೇಶದ ಹೆಸರು ಹಾಳು ಮಾಡುವುದನ್ನು ತಡೆಯಲು ದೇಶದ್ರೋಹದ ಕಾನೂನಿನ ಅಗತ್ಯ ಇದೆ ಎಂದು ಮಾಜಿ ಲೋಕಾಯುಕ್ತ ಹಾಗೂ ಭಾರತದ ಮಾಜಿ ಸಾಲಿಸಿಟರ್‌ ಜನರಲ್‌ ಎನ್‌ ಸಂತೋಷ್‌ ಹೆಗ್ಡೆ ಅವರು ಸೋಮವಾರ ಹೇಳಿದ್ದಾರೆ.
ಸಂಸತ್ ದಾಳಿ ರೂವಾರಿ ಅಫ್ಜಲ್‌ ಗುರುವನ್ನು ಗಲ್ಲಿಗೇರಿಸಿದ ಪ್ರಕರಣ ನ್ಯಾಯಾಂಗದಿಂದ ನಡೆದ ಕೊಲೆ ಎಂದು ಹೇಳಿ ದೇಶ ವಿರೋಧಿ ಘೋಷಣೆಗಳನ್ನು ಕೂಗುವುದು ಖಂಡಿತವಾಗಿಯೂ ದೇಶದ್ರೋಹ ಎನಿಸುತ್ತದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಅಭಿಪ್ರಾಯಪಟ್ಟಿದ್ದಾರೆ.
ದೇಶದ್ರೋಹದ ಕಾನೂನಿನಲ್ಲಿ ನನಗೆ ನಂಬಿಕೆ ಇದೆ. ಏಕೆಂದರೆ ನಾನೊಬ್ಬ ದೇಶಪ್ರೇಮಿ. ನಿಜವಾದ ದೇಶಪ್ರೇಮಿಗಳು ಎಂದೂ ದೇಶದ ವಿರುದ್ಧ ಘೋಷಣೆ ಕೂಗುವುದಿಲ್ಲ; ದೇಶದ ಹೆಸರನ್ನು ಹಾಳು ಮಾಡುವುದಿಲ್ಲ; ಸಂವಿಧಾನದತ್ತವಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹಲವಾರು ಮಾನದಂಡಗಳಿವೆ ಎಂದು ಹೆಗ್ಡೆ ಹೇಳಿದ್ದಾರೆ.
"ಈ ದೇಶದಲ್ಲಿ ಕೆಲವರು ಬೇರೆಯೇ ದೇಶಕ್ಕೆ ನಿಷ್ಠೆ ಹೊಂದಿದವರಿದ್ದಾರೆ ಮತ್ತು ದೇಶ ವಿರೋಧಿ ಗುಂಪುಗಳಿಗೆ ನಿಷ್ಠರಾಗಿರುವವರಿದ್ದಾರೆ; ಅವರು ವಿಭಿನ್ನವಾಗಿ ಚಿಂತಿಸುತ್ತಾರೆ. ದೇಶದಲ್ಲಿ ಪ್ರಜಾಸತ್ತೆ ಉಳಿಯಬೇಕಾದರೆ ದೇಶದ ವಿರುದ್ಧ ಮಾತನಾಡುವವರ ವಿರುದ್ಧ ಕಾನೂನು ರೀತ್ಯಾ ನಿರ್ಬಂಧಗಳು ಇರುವುದು ಅತೀ ಅಗತ್ಯ' ಎಂದು ಹೆಗ್ಡೆ ಹೇಳಿದರು.
ಕೆಲವು ದಿನಗಳ ಹಿಂದೆ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ಇನ್ನೂ ಐವರು ವಿದ್ಯಾರ್ಥಿಗಳ ನಿನ್ನೆ ರಾತ್ರಿಯಷ್ಟೇ ವಿವಿ ಆವರಣದಲ್ಲಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT