ಎಸ್.ಕೆ.ಮುಖರ್ಜಿ ಅವರನ್ನು ಅಭಿನಂದಿಸುತ್ತಿರುವ ರಾಜ್ಯಪಾಲ ವಿಜುಭಾಯಿ ವಾಲಾ
ಬೆಂಗಳೂರು: ಕಳೆದ 10 ತಿಂಗಳಿಂದ ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನ್ಯಾಯಮೂರ್ತಿ ಸುಭ್ರೋ ಕಮಲ್ ಮುಖರ್ಜಿ ಅವರು ಮಂಗಳವಾರ ಸಂಜೆ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಮುಖರ್ಜಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಎಸ್.ಕೆ. ಮುಖರ್ಜಿ ಅವರು 2015ರ ಏಪ್ರಿಲ್ 15ರಂದು ಕೋಲ್ಕತಾ ಹೈಕೋರ್ಟ್ ನಿಂದ ಕರ್ನಾಟಕ ಹೈಕೋರ್ಟ್ ಗೆ ವರ್ಗಾವಣೆಗೊಂಡಿದ್ದರು. ಜೂನ್ 1ರಿಂದ ರಾಜ್ಯ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos