ಧಾರ್ಮಿಕ ಅಲ್ಪಸಂಖ್ಯಾತರು (ಸಾಂಕೇತಿಕ ಚಿತ್ರ ) 
ಪ್ರಧಾನ ಸುದ್ದಿ

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ: ಆತಂಕ ವ್ಯಕ್ತಪಡಿಸಿ ಅಮೆರಿಕ ಸಂಸದರಿಂದ ಮೋದಿಗೆ ಪತ್ರ

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕದ 34 ಪ್ರಮುಖ ಸಂಸದರು ಪತ್ರ ಬರೆದಿದ್ದಾರೆ

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕದ 34 ಪ್ರಮುಖ ಸಂಸದರು ಪತ್ರ ಬರೆದಿದ್ದು ಧಾರ್ಮಿಕ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ.
ಧಾರ್ಮಿಕ ಅಲ್ಪಸಂಖ್ಯಾತರಾದ ಕ್ರೈಸ್ತರು, ಮುಸ್ಲಿಮರು, ಸಿಕ್ಖರ ಮೇಲೆ ದೌರ್ಜನ್ಯ ಎಸಗಲಾಗುತ್ತಿದ್ದು, ದೌರ್ಜನ್ಯ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು 8 ಜನ ಸೆನೆಟರ್ ಗಳು ಸೇರಿದಂತೆ ಅಮೆರಿಕದ 34 ಸಂಸದರು ಮೋದಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಆರ್ ಎಸ್ ಎಸ್ ಸಂಘಟನೆ ಚಟುವಟಿಕೆಗಳನ್ನು ಕೇಂದ್ರ ಸರ್ಕಾರ ನಿಯಂತ್ರಿಸಿ ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಪಾಡಲು ಭಾರತೀಯ ಭದ್ರತಾ ಪಡೆಗಳಿಗೆ ನಿರ್ದೇಶನ ನೀಡಬೇಕೆಂದು  ಯುಎಸ್ ನ ಹೌಸ್ ಆಫ್  ರೆಪ್ರೆಸೆಂಟೆಟೀವ್ಸ್ ನ ಸದಸ್ಯರಾದ ಜೋಸೆಫ್ ಪಿಟ್ಸ್,  ಕೀತ್ ಎಲ್ಲಿಸನ್, ಬ್ರಾಡ್ ವೆನ್ಸ್ ಟ್ರಪ್, ಜಿಮ್ ಕೋಸ್ಟಾ, ಟ್ರೆಂಟ್ ಫ್ರಾಂಕ್ಸ್, ಟೆಡ್ ಪೋ ಮತ್ತು ಮಾರ್ಕ್ ವಾಕರ್ ಹಾಗೂ 8 ಸೆನೆಟರ್ಸ್ ಗಳು ಮೋದಿ ಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ಉದಾಹರಣೆ ನೀಡಿರುವ ಅಮೆರಿಕ ಸಂಸದರು, 2014 ಜೂನ್ 17 ರಂದು ಚತ್ತೀಸ್ ಗಢದ ಬಸ್ತಾರ್ ನ  50 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕೈಗೊಳ್ಳಲಾದ ಹಿಂದೂಯೇತರ ಧಾರ್ಮಿಕ ಪ್ರಚಾರ ನಿಷೇಧ ಕ್ರಮವನ್ನು ಉಲ್ಲೇಖಿಸಿದ್ದಾರೆ.
ಹಿಂದೂಯೇತರ ಧರ್ಮ ಪ್ರಚಾರವನ್ನು ನಿಷೇಧ ಕ್ರೈಸ್ತ ಮತ ಆಚರಣೆಯನ್ನು ಪರಿಣಾಮಕಾರಿಯಾಗಿ ಕಾನೂನುಬಾಹಿರವನ್ನಾಗಿಸಲಾಗಿದೆ. ಇದರಿಂದ 300 ಕ್ಕೂ ಹೆಚ್ಚು ಕ್ರೈಸ್ತ ಕುಟುಂಬಗಳ ಮೇಲೆ ದಾಳಿ ನಡೆದಿದೆ. ಹಿಂದುಯೇತರ ಧರ್ಮದವರನ್ನು ಹಿಂದೂಧರ್ಮಕ್ಕೆ ಮತಾಂತರಗೊಳ್ಳಬೇಕೆಂದು ಒತ್ತಾಯ ಹೇರಲಾಗುತ್ತಿದೆ ಎಂದು ಮೋದಿಗೆ ಬರೆದ ಪತ್ರದಲ್ಲಿ ಅಮೆರಿಕ ಸಂಸದರು ಆರೋಪಿಸಿದ್ದಾರೆ.
ಮುಸ್ಲಿಂ ಧರ್ಮದ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ಬಗ್ಗೆಯೂ ಅಮೆರಿಕ ಸಂಸದರ ಪತ್ರ ಆತಂಕ ವ್ಯಕ್ತಪಡಿಸಿದ್ದು ಧಾರ್ಮಿಕ ಸ್ವಾತಂತ್ರ್ಯ ಮತ್ತು ಕೋಮು ಸಾಮರಸ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅದನ್ನು ಕಾರ್ಯರೂಪಕ್ಕೆ ತರಬೇಕೆಂದು ಮನವಿ ಮಾಡುಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT