ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ನಾನು ಮೋದಿಗಿಂತ ದೊಡ್ಡ ದೇಶಭಕ್ತ: ಕೇಜ್ರಿವಾಲ್

ದೇಶದ್ರೋಹದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾನು ಪ್ರಧಾನಿ ನರೇಂದ್ರ ಮೋದಿಯವರಿಗಿಂತಲೂ ದೊಡ್ಡ ದೇಶಭಕ್ತ...

ನವದೆಹಲಿ: ದೇಶದ್ರೋಹದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾನು ಪ್ರಧಾನಿ ನರೇಂದ್ರ ಮೋದಿಯವರಿಗಿಂತಲೂ ದೊಡ್ಡ ದೇಶಭಕ್ತ ಎಂದು ಹೇಳಿದ್ದಾರೆ.
ಸೋಮವಾರ ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿದ ಕೇಜ್ರಿವಾಲ್, ನನ್ನ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದೆ. ನಾನು ದಲಿತ, ಹಿಂದುಳಿದ ವರ್ಗ ಮತ್ತು ಬಡವರ ಪರವಾಗಿ ದನಿಯೆತ್ತಿದ್ದೇನೆ. ಹಾಗಾಗಿ ಬಿಜೆಪಿಯವರ ಪಾಲಿಗೆ ದೇಶ ವಿರೋಧಿ. ನನ್ನ ಸದ್ದಡಗಿಸಲಾಗುವುದಿಲ್ಲ, ನಾನು ಅವರಿಗಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದಿದ್ದಾರೆ.
ಅದೇ ವೇಳೆ ಜೆಎನ್‌ಯುನಲ್ಲಿ ಭಾರತ ವಿರೋಧಿ ಘೋಷಣೆ ಕೂಗಿದವರು ಕಾಶ್ಮೀರದವರಾಗಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ನಾನು ಮೋದಿಯವರಿಗಿಂತ ದೊಡ್ಡ ದೇಶಭಕ್ತ. ದೇಶವನ್ನು ಒಡೆಯುತ್ತೇವೆ ಎಂದು ಘೋಷಣೆ ಕೂಗಿದವರನ್ನು ಯಾಕೆ ಇಲ್ಲಿಯವರೆಗೆ ಬಂಧಿಸಿಲ್ಲ ಎಂದು ನಾನು ಕೇಳುತ್ತೇನೆ. ಯಾಕೆಂದರೆ ಅವರು ಕಾಶ್ಮೀರದವರು. ಅವರನ್ನು ಬಂಧಿಸಿದರೆ ಮೆಹಬೂಬ ಮುಫ್ತಿ ಮುನಿಸಿಕೊಳ್ಳುತ್ತಾರೆ.
ನಮ್ಮ ಸೈನಿಕರು ಗಡಿಭಾಗದಲ್ಲಿ ಪ್ರತೀ ದಿನ ಹುತಾತ್ಮರಾಗುತ್ತಿದ್ದಾರೆ. ಆದರೆ ಕಾಶ್ಮೀರದಲ್ಲಿ ಸರ್ಕಾರ ರಚಿಸುವುದಕ್ಕೋಸ್ಕರ ಮೋದಿಯವರು ದೇಶ ವಿರೋಧಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT